Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IND VS BAN 1st ODI: ಭಾರತಕ್ಕೆ ಬಾರಿ ಷಾಕ್ ನೀಡಿದ ಬಾಂಗ್ಲಾದೇಶ ; ರೋಚಕ ಪಂದ್ಯದಲ್ಲಿ ಘೋರ ಪರಾಭವ….!

Facebook
Twitter
Telegram
WhatsApp

 

ಟೀಂ ಇಂಡಿಯಾಗೆ ಬಾಂಗ್ಲಾದೇಶ ಭಾರೀ ಆಘಾತ ನೀಡಿದೆ. 3 ಏಕದಿನ ಸರಣಿಯ ಅಂಗವಾಗಿ ಇಂದು (ಡಿಸೆಂಬರ್ 4) ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ಟೀಂ ಇಂಡಿಯಾ ವಿರುದ್ಧದ ರೋಚಕ ಪಂದ್ಯದಲ್ಲಿ ಒಂದು ವಿಕೆಟ್ ನಿಂದ ಜಯಗಳಿಸಿ ಸಂಚಲನ ಮೂಡಿಸಿದೆ.

ತೀವ್ರ ಪೈಪೋಟಿಯ ಈ ಪಂದ್ಯದಲ್ಲಿ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಮೆಹಿದಿ ಹಸನ್ (ಅಜೇಯ 38) ಮತ್ತು ಮುಸ್ತಫಿಜುರ್ (ಔಟಾಗದೆ 10) ಬಾಂಗ್ಲಾದೇಶಕ್ಕೆ ಸ್ಮರಣೀಯ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

ಮೆಹಿದಿ ಮತ್ತು ಮುಸ್ತಫಿಜುರ್ ಕೊನೆಯ ವಿಕೆಟ್‌ ಜೊತೆಯಾಟದಲ್ಲಿ ಅಜೇಯ 51 ರನ್ ಸೇರಿಸಿ ಟೀಂ ಇಂಡಿಯಾ ಗೆಲುವಿನ ಅವಕಾಶಕ್ಕೆ ಅಡ್ಡಿಯಾದರು. ಈ ಪಂದ್ಯದಲ್ಲಿ ಭಾರತದ ಫೀಲ್ಡರ್ ಗಳ ಕಳಪೆ ಪ್ರದರ್ಶನ ಸೋಲಿಗೆ ಪ್ರಮುಖ ಕಾರಣವಾಗಿದೆ.

136 ರನ್‌ಗಳಾಗುವಷ್ಟರಲ್ಲಿ ಒಂಬತ್ತನೇ ವಿಕೆಟ್‌ ಕಳೆದುಕೊಂಡು ಸೋಲಿನ ಅಂಚಿನಲ್ಲಿ ನಿಂತಿದ್ದ ಬಾಂಗ್ಲಾದೇಶವನ್ನು  ಭಾರತದ ಫೀಲ್ಡರ್‌ಗಳೇ ಗೆಲುವಿನ ದಡ ಸೇರಿಸಿದರು. ಬಾಂಗ್ಲಾದೇಶ 46 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡಿತಾದರೂ ಭಾರತ ನೀಡಿದ್ದ ಸಾಧಾರಣ ಮೊತ್ತವನ್ನು ಬೇಧಿಸಿದರು.

ಎದುರಾಳಿಯ ಆಹ್ವಾನದ ಮೇರೆಗೆ ಭಾರತ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿತು. ಕೆಎಲ್ ರಾಹುಲ್ (70 ಎಸೆತಗಳಲ್ಲಿ 73; 5 ಬೌಂಡರಿ, 4 ಸಿಕ್ಸರ್) ಹೊರತುಪಡಿಸಿ ಭಾರತದ ಎಲ್ಲಾ ಬ್ಯಾಟ್ಸ್ ಮನ್ ಗಳು ರನ್ ಕಲೆಹಾಕುವಲ್ಲಿ ದಯನೀಯವಾಗಿ ವಿಫಲರಾದರು.

ಶಿಖರ್ ಧವನ್ (7), ಕೊಹ್ಲಿ (9), ಶಹಬಾಜ್ ಅಹ್ಮದ್ (0), ಶಾರ್ದೂಲ್ ಠಾಕೂರ್ (2), ದೀಪಕ್ ಚಹಾರ್ (0), ಸಿರಾಜ್ (9) ಪೆವಿಲಿಯನ್ ಗೆ ಅಣಿಯಾದರು. ನಾಯಕ ರೋಹಿತ್ ಶರ್ಮಾ (27), ಶ್ರೇಯಸ್ ಅಯ್ಯರ್ (24) ಮತ್ತು ವಾಷಿಂಗ್ಟನ್ ಸುಂದರ್ (19) ರನ್‌ಗಳಿಂದ ಎರಡಂಕಿ ಮೊತ್ತ ಗಳಿಸಲು ಸಾಧ್ಯವಾಯಿತು.

ಆ ಬಳಿಕ ಭಾರತ ನೀಡಿದ್ದ ಅಲ್ಪ ಮೊತ್ತದ ಗುರಿ ಮುಟ್ಟಲು ಕಣಕ್ಕೆ ಇಳಿದ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್ ಗಳಾದ ಸಿರಾಜ್ (3/32), ಕುಲದೀಪ್ ಸೇನ್ (2/37), ಸುಂದರ್ (2/17), ಶಾರ್ದೂಲ್ ಠಾಕೂರ್ (1/15), ದೀಪಕ್ ಚಹಾರ್ ( 1/32) ಸ್ಕೋರ್ 136  ರನ್‌ಗಳಿಗೆ ಒಂಬತ್ತು ವಿಕೆಟ್‌ಗಳನ್ನು ಕಳೆದುಕೊಂಡಿದ್ದರೂ, ಮೆಹದಿ ಹಸನ್ ಮತ್ತು ಮುಸ್ತಫಿಜುರ್ ತಮ್ಮ ತಂಡಕ್ಕೆ ಅತ್ಯುತ್ತಮ ಹೋರಾಟದ ಶೈಲಿಯನ್ನು ಪ್ರದರ್ಶಿಸುವ ಮೂಲಕ ಐತಿಹಾಸಿಕ ಜಯವನ್ನು ನೀಡಿದರು.

ಇದರಿಂದಾಗಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶ 1-0 ಮುನ್ನಡೆ ಸಾಧಿಸಿದೆ. ಉಭಯ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಡಿಸೆಂಬರ್ 7ರಂದು ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

error: Content is protected !!