Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IND VS NZ 1st ODI : ಇತಿಹಾಸದಲ್ಲಿಯೇ  ಮೊದಲ ಬಾರಿಗೆ ; ಭಾರತ ತಂಡದ ಕಳಪೆ ಸಾಧನೆ…!

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್ 

ಆಕ್ಲೆಂಡ್ ಮೈದಾನದಲ್ಲಿ ಇಂದು ನಡೆದ (ನವೆಂಬರ್ 25) ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.

ನ್ಯೂಜಿಲೆಂಡ್ ನೆಲದಲ್ಲಿ ಸತತವಾಗಿ 4 ನೇ ಬಾರಿಗೆ ಏಕದಿನ ಪಂದ್ಯಗಳಲ್ಲಿ ಸೋತಿದ್ದು, ಇದು ಇತಿಹಾಸದಲ್ಲಿ ಹಿಂದೆಂದಿಗಿಂತಲೂ ಕೆಟ್ಟ ಸಾಧನೆಯಾಗಿದೆ. ಭಾರತ ತಂಡವು 2020 ರಲ್ಲಿ ಸರಣಿಯನ್ನು 0-3 ಅಂತರದಿಂದ ಸರಣಿಯನ್ನು ಕಳೆದುಕೊಂಡಿತ್ತು. ಇಂದು ನಡೆದ ಪಂದ್ಯದಲ್ಲಿ ಸೋಲಿನೊಂದಿಗೆ ಮತ್ತೆ ನ್ಯೂಜಿಲೆಂಡ್ ನೆಲದಲ್ಲಿ ಸತತ ನಾಲ್ಕನೇ ಸೋಲನ್ನು ದಾಖಲಿಸಿದೆ.

ಕಳೆದ ಬಾರಿಯ ಪ್ರವಾಸದಲ್ಲಿ ಭಾರತ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್, ಎರಡನೇ ಏಕದಿನದಲ್ಲಿ 22 ರನ್‌ಗಳ ಅಂತರದಿಂದ ಮತ್ತು ಮೂರನೇ ಏಕದಿನ ಪಂದ್ಯದಲ್ಲಿದಲ್ಲಿ 5 ವಿಕೆಟ್ ಗಳಿಂದ ಸೋತಿತ್ತು.

2022ರ ಪ್ರವಾಸದ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಅಂತರದಿಂದ ಸೋತು ನ್ಯೂಜಿಲೆಂಡ್ ನೆಲದಲ್ಲಿ ಏಕದಿನ ಪಂದ್ಯಗಳಲ್ಲಿ ಅತ್ಯಂತ ಕಳಪೆ ಸಾಧನೆಯನ್ನು ತೋರಿದೆ. (ಒಟ್ಟು ಪಂದ್ಯಗಳಲ್ಲಿ ನ್ಯೂಜಿಲೆಂಡ್ 25 ಪಂದ್ಯ ಗೆದ್ದರೆ, ಭಾರತ ಕೇವಲ 14 ಪಂದ್ಯಗಳನ್ನು ಗೆದ್ದಿದೆ)

ಏತನ್ಮಧ್ಯೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಶ್ರೇಯಸ್ ಅಯ್ಯರ್ (80), ಶಿಖರ್ ಧವನ್ (72) ಹಾಗೂ ಶುಭಮನ್ ಗಿಲ್ (50) ಅರ್ಧಶತಕ ಸಿಡಿಸಿ ಮಿಂಚಿದರು.

ನ್ಯೂಜಿಲೆಂಡ್ ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ಆಟ ಮುಗಿಸುವ ಮೂಲಕ ಗೆಲುವು ಸಾಧಿಸಿದರು.

ಟಾಮ್ ಲ್ಯಾಥಮ್ (104 ಎಸೆತಗಳಲ್ಲಿ 145 (19 ಬೌಂಡರಿ, 5 ಸಿಕ್ಸರ್) ಅಜೇಯ ಶತಕ ಹಾಗೂ ನಾಯಕ ಕೇನ್ ವಿಲಿಯಮ್ಸನ್ (98 ಎಸೆತಗಳಲ್ಲಿ ಔಟಾಗದೆ 94, 7 ಬೌಂಡರಿ, ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

error: Content is protected !!