Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IND vs NZ 2nd Test : ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಅಜಾಜ್ ಪಟೇಲ್

Facebook
Twitter
Telegram
WhatsApp

 

ಮುಂಬಯಿ, (ಡಿ.04) : ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್ ಅಜಾಜ್ ಪಟೇಲ್ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ನಂತರ, ಅಜಾಜ್ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದ ಏಕೈಕ ಮೂರನೇ ಬೌಲರ್‌ ಆದರು.

ಟೆಸ್ಟ್ ಪಂದ್ಯವೊಂದರ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಜಾಜ್ ಪಟೇಲ್ ಭಾರತದ ಅನಿಲ್ ಕುಂಬ್ಳೆ ಮತ್ತು ಜಿಮ್ ಲೇಕರ್ ಅವರ ದಾಖಲೆಯನ್ನು ಸರಿಗಟ್ಟಿದರು.  ಅಜಾಜ್‌ಗಿಂತ ಮೊದಲು, ಇಂಗ್ಲೆಂಡ್ ವೇಗಿ ಜಿಮ್ ಲೇಕರ್ 1956 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದಿದ್ದರು,  ಮತ್ತು ಅನಿಲ್ ಕುಂಬ್ಳೆ 1999 ರಲ್ಲಿ ಪಾಕಿಸ್ತಾನದ ವಿರುದ್ಧ ಎಲ್ಲಾ 10 ವಿಕೆಟ್‌ಗಳನ್ನು ಪಡೆದಿದ್ದರು.

ಅಜಾಜ್ ಪಟೇಲ್ 21ನೇ ಶತಮಾನದಲ್ಲಿ 10 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ, ಅಜಾಜ್ ಪಟೇಲ್ ಒಬ್ಬರೇ ಇನ್ನಿಂಗ್ಸ್‌ನಲ್ಲಿ 47 ಓವರ್‌ಗಳಿಗಿಂತ ಹೆಚ್ಚು ಬೌಲ್ ಮಾಡಿದರು, ಆದರೆ ಅವರ ಉಳಿದ ಸಹ ಆಟಗಾರರು 22 ಓವರ್‌ಗಳ ಗಡಿಯನ್ನು ದಾಟಲಿಲ್ಲ.

ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳ ದಾಖಲೆಯನ್ನು ಸರಿಗಟ್ಟುವುದರ ಜೊತೆಗೆ, ಅಜಾಜ್ ಪಟೇಲ್ ಇತರ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಭಾರತದ ವಿರುದ್ಧ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಕಬಳಿಸಿದ ನಂತರ, ಅಜಾಜ್ ಪಟೇಲ್ ಪ್ರವಾಸಿ ಆಟಗಾರನ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅವರಿಗಿಂತ ಮೊದಲು, ನಾಥನ್ ಲಿಯಾನ್ (8/50) ಮತ್ತು ಜೇಸನ್ ಕ್ರೆಜ್ಜಾ (8/215) ಪಟ್ಟಿಯಲ್ಲಿದ್ದಾರೆ.

ಅಷ್ಟೇ ಅಲ್ಲದೇ 1985 ರಲ್ಲಿ ಭಾರತದ ವಿರುದ್ಧ ಇನ್ನಿಂಗ್ಸ್‌ನಲ್ಲಿ 9 ವಿಕೆಟ್‌ಗಳನ್ನು ಪಡೆದ ರಿಚರ್ಡ್ ಹ್ಯಾಡ್ಲಿ ಅವರ ದಾಖಲೆಯನ್ನು ಮುರಿದು, ಭಾರತದಲ್ಲಿ ಭಾರತದ ವಿರುದ್ಧ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!