Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IND vs SA: ಭಾರತಕ್ಕೆ ಹೀನಾಯ ಸೋಲು ; ರೋಹಿತ್ ಪಡೆಗೆ 32 ರನ್‌ಗಳ ಸೋಲು

---Advertisement---

ಸುದ್ದಿಒನ್ : ದಕ್ಷಿಣ ಆಫ್ರಿಕಾದಲ್ಲಿ ಕಳೆದ 30 ವರ್ಷಗಳಿಂದ ನನಸಾಗದ ಕನಸು ನನಸಾಗಲಿದೆ ಎಂದು ಭಾವಿಸಿದ್ದ ರೋಹಿತ್ ಶರ್ಮಾ ಪಡೆ ಮೊದಲ ಟೆಸ್ಟ್ ನಲ್ಲಿ ಹೀನಾಯ ಸೋಲು ಕಂಡಿದೆ.  ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ವಿಫಲವಾಗಿ ಇನ್ನಿಂಗ್ಸ್ 32 ರನ್ ಗಳಿಂದ ಸೋಲು ಕಂಡಿತು. 

ಇದರಿಂದ ಭಾರತೀಯ ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲೌಟ್ ಆಗಿತ್ತು. 256/5 ಓವರ್‌ನೈಟ್ ಸ್ಕೋರ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ 408 ರನ್‌ಗಳಿಗೆ ಆಲೌಟ್ ಆಗಿ 163 ರನ್‌ಗಳ ಮುನ್ನಡೆ ಸಾಧಿಸಿತು. ದಕ್ಷಿಣ ಆಫ್ರಿಕಾ ಪರವಾಗಿ ಎಲ್ಗರ್ 185 ರನ್ ಮತ್ತು ಮಾರ್ಕೊ ಜಾನ್ಸೆನ್ 84 ರನ್ ಗಳಿಸಿದರು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಮೇಲಿಂದಮೇಲೆ ವಿಕೆಟ್‌ಗಳನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಮಾತ್ರ (76 ರನ್, 82 ಎಸೆತ, 12 ಬೌಂಡರಿ, 1 ಸಿಕ್ಸರ್) ಏಕಾಂಗಿ ಹೋರಾಟ ನಡೆಸಿದರು. 8 ಬ್ಯಾಟ್ಸ್‌ಮನ್‌ಗಳು ಸಿಂಗಲ್ ಡಿಜಿಟ್ ಸ್ಕೋರ್‌ಗೆ ಸೀಮಿತರಾದರು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಡಕ್ ಆಗಿ ಮರಳುವ ಮೂಲಕ ನಿರಾಸೆ ಮೂಡಿಸಿದರು.

ಯಶಸ್ವಿ ಜೈಸ್ವಾಲ್ 5, ಶುಭಮನ್ ಗಿಲ್ 26, ಶ್ರೇಯಸ್ ಅಯ್ಯರ್ 6, ಕೆಎಲ್ ರಾಹುಲ್ 4, ಅಶ್ವಿನ್ 0, ಶಾರ್ದೂಲ್ ಠಾಕೂರ್ 2 ರನ್ ಗಳಿಸಿದರು. ಕೊಹ್ಲಿ ಸ್ವಲ್ಪ ಹೊತ್ತು ಹೋರಾಟ ನಡೆಸಿದರೂ ಅವರಿಗೆ ಜೊತೆಯಾಗಿ ಯಾವ ಆಟಗಾರನಿಂದಲೂ ಬೆಂಬಲ ಸಿಗಲಿಲ್ಲ. ಕೊನೆಯ ವಿಕೆಟ್ ನೊಂದಿಗೆ ಭಾರತ 131 ರನ್ ಗಳಿಗೆ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾದ ಬೌಲರ್‌ಗಳಲ್ಲಿ ಬರ್ಗರ್ 4 ವಿಕೆಟ್ ಹಾಗೂ ಮಾರ್ಕೊ ಜಾನ್ಸನ್ 3 ವಿಕೆಟ್, ರಬಾಡ 2 ವಿಕೆಟ್
ಪಡೆದು ಭಾರತವನ್ನು ಸೋಲಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment