Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IND vs SA: ಭಾರತಕ್ಕೆ ಹೀನಾಯ ಸೋಲು ; ರೋಹಿತ್ ಪಡೆಗೆ 32 ರನ್‌ಗಳ ಸೋಲು

Facebook
Twitter
Telegram
WhatsApp

ಸುದ್ದಿಒನ್ : ದಕ್ಷಿಣ ಆಫ್ರಿಕಾದಲ್ಲಿ ಕಳೆದ 30 ವರ್ಷಗಳಿಂದ ನನಸಾಗದ ಕನಸು ನನಸಾಗಲಿದೆ ಎಂದು ಭಾವಿಸಿದ್ದ ರೋಹಿತ್ ಶರ್ಮಾ ಪಡೆ ಮೊದಲ ಟೆಸ್ಟ್ ನಲ್ಲಿ ಹೀನಾಯ ಸೋಲು ಕಂಡಿದೆ.  ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ವಿಫಲವಾಗಿ ಇನ್ನಿಂಗ್ಸ್ 32 ರನ್ ಗಳಿಂದ ಸೋಲು ಕಂಡಿತು. 

ಇದರಿಂದ ಭಾರತೀಯ ಅಭಿಮಾನಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲೌಟ್ ಆಗಿತ್ತು. 256/5 ಓವರ್‌ನೈಟ್ ಸ್ಕೋರ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ 408 ರನ್‌ಗಳಿಗೆ ಆಲೌಟ್ ಆಗಿ 163 ರನ್‌ಗಳ ಮುನ್ನಡೆ ಸಾಧಿಸಿತು. ದಕ್ಷಿಣ ಆಫ್ರಿಕಾ ಪರವಾಗಿ ಎಲ್ಗರ್ 185 ರನ್ ಮತ್ತು ಮಾರ್ಕೊ ಜಾನ್ಸೆನ್ 84 ರನ್ ಗಳಿಸಿದರು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಮೇಲಿಂದಮೇಲೆ ವಿಕೆಟ್‌ಗಳನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಮಾತ್ರ (76 ರನ್, 82 ಎಸೆತ, 12 ಬೌಂಡರಿ, 1 ಸಿಕ್ಸರ್) ಏಕಾಂಗಿ ಹೋರಾಟ ನಡೆಸಿದರು. 8 ಬ್ಯಾಟ್ಸ್‌ಮನ್‌ಗಳು ಸಿಂಗಲ್ ಡಿಜಿಟ್ ಸ್ಕೋರ್‌ಗೆ ಸೀಮಿತರಾದರು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಡಕ್ ಆಗಿ ಮರಳುವ ಮೂಲಕ ನಿರಾಸೆ ಮೂಡಿಸಿದರು.

ಯಶಸ್ವಿ ಜೈಸ್ವಾಲ್ 5, ಶುಭಮನ್ ಗಿಲ್ 26, ಶ್ರೇಯಸ್ ಅಯ್ಯರ್ 6, ಕೆಎಲ್ ರಾಹುಲ್ 4, ಅಶ್ವಿನ್ 0, ಶಾರ್ದೂಲ್ ಠಾಕೂರ್ 2 ರನ್ ಗಳಿಸಿದರು. ಕೊಹ್ಲಿ ಸ್ವಲ್ಪ ಹೊತ್ತು ಹೋರಾಟ ನಡೆಸಿದರೂ ಅವರಿಗೆ ಜೊತೆಯಾಗಿ ಯಾವ ಆಟಗಾರನಿಂದಲೂ ಬೆಂಬಲ ಸಿಗಲಿಲ್ಲ. ಕೊನೆಯ ವಿಕೆಟ್ ನೊಂದಿಗೆ ಭಾರತ 131 ರನ್ ಗಳಿಗೆ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾದ ಬೌಲರ್‌ಗಳಲ್ಲಿ ಬರ್ಗರ್ 4 ವಿಕೆಟ್ ಹಾಗೂ ಮಾರ್ಕೊ ಜಾನ್ಸನ್ 3 ವಿಕೆಟ್, ರಬಾಡ 2 ವಿಕೆಟ್
ಪಡೆದು ಭಾರತವನ್ನು ಸೋಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!