Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜುಲೈ ಕೊನೆ ವಾರದಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಷಡಕ್ಷರಿ ಎಚ್ಚರಿಕೆ

---Advertisement---

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನ ಹೆಚ್ಚಳಕ್ಕಾಗಿ ಕಾದು ಕುಳಿತಿದ್ದರು. ಆದರೆ ಏಳನೇ ವೇತನ ಆಯೋಗ ಜಾರಿಯಾಗಲ್ಲ ಎಂಬುದನ್ನು ತಿಳಿಸಿದ ಮೇಲೆ ಸರ್ಕಾರಿ ನೌಕರರು ಕೋಪಗೊಂಡಿದ್ದಾರೆ. ಅನಿರ್ದಿಷ್ಟವಾಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಎಚ್ಚರಿಕೆಯನ್ನು ನೀಡಿದ್ದಾರೆ.

7ನೇ ವೇತನ ಆಯೋಗವು ಸರ್ಕಾರಕ್ಕೆ ಒಪ್ಪಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಎನ್.ಪಿ.ಎಸ್ ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಆಯೋಗವೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್ಮೆಂಟ್ ಸೌಲಭ್ಯವನ್ನು ಜಾರಿಗೊಳಿಸಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿಗೆ ಮರು ಚಾಲನೆ ನೀಡಬೇಕು ಸೇರಿದಂತೆ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರಿ ನೌಕರರು ಇಟ್ಟಿದ್ದಾರೆ.

ಜುಲೈ 14ರವರೆಗೆ ಆಯಾ ತಾಲೂಕು ಮತ್ತು ಜಿಲ್ಲಾ ಶಾಖೆಗಳು ನೌಕರರು – ಪದಾಧಿಕಾರಿಗಳು – ವೃಂದ ಸಂಘಗಳೊಂದಿಗೆ ಮನವಿ ಪತ್ರ ಸಲ್ಲಿಸುತ್ತಾರೆ. ಎರಡನರೆ ಹಂತವಾಗಿ ಜುಲೈ 3ನೇ ವಾರದಲ್ಲಿ ರಾಜ್ಯ ಕಾರ್ಯಕಾರಿ ಹಾಗೂ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ಸಭೆಯನ್ನು ಕರೆದು ಹೋರಾಟದ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ. ಜುಲೈ 28ರ ಒಳಗೆ ಸಂಘದ ಪ್ರಮುಖ 3 ಬಡಿಕೆಗಳನ್ನು ಸರ್ಕಾರ ಈಡೇರಿಸದೆ ಇದ್ದಲ್ಲಿ ಅನಿವಾರ್ಯವಾಗಿ ಏ ಹಂತವಾಗಿ ಜುಲೈ ಕೊನೆಯ ವಾರದಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತೇವೆ. ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...