Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

100 ಕೋಟಿ ಲಸಿಕೆ ನೀಡಿದ ವಿಶ್ವದ ಮೊದಲ ದೇಶ ಭಾರತ: ತಾ.ಪಂ ಸದಸ್ಯ ಎಸ್. ಸುರೇಶ್

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.26) : 100 ಕೋಟಿ ಲಸಿಕೆ ನೀಡಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಕ್ಷೇತ್ರದ ವ್ಯಾಪ್ತಿಯ ಜನರು ತಪ್ಪು ತಿಳುವಳಿಕೆ ಹೋಗಲಾಡಿಸಿ ಲಸಿಕೆ ಪಡೆಯಿರಿ ಎಂದು ತಾಲ್ಲೂಕು ಪಂಚಾಯತ್ ಸದಸ್ಯ ಎಸ್.ಸುರೇಶ್ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಮತ್ತು ಹಿರೇಗುಂಟನೂರು ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಲಸಿಕೆ ಹಿಂಜರಿಕೆ ಇದ್ದ ಕಾರಣ ಮಂಗಳವಾರ ತಾಲ್ಲೂಕು ಆರೋಗ್ಯಾಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ನಿಘಾವಣಾ ತಂಡ ಮತ್ತು ಮನೆ ಮನೆ ಭೇಟಿ ಗುಂಪು ಸಭೆ ಗ್ರಾಮಸ್ಥರೊಂದಿಗೆ ಸಭೆ ನಡೆಸಲಾಯಿತು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಲಸಿಕೆ ಸುರಕ್ಷಿತವಾಗಿದೆ ಯಾವುದೇ ಅನುಮಾನ ಬೇಡ ನಿಮ್ಮ ಕುಟುಂಬದ ರಕ್ಷಣೆ ನಿಮ್ಮ ಜೊತೆ ಇರುವ ಸಮುದಾಯದ ಸುರಕ್ಷತೆಗಾಗಿ ಲಸಿಕೆ ಪಡೆಯಿರಿ ಎಂದರು.

ಗ್ರಾಮದಲ್ಲಿ ಜಾಥಾ ನಡೆಸಿ ಲಸಿಕೆ ಹಾಕಿಸಿ ಕೋವಿಡ್ ಓಡಿಸಿ ಎಂದು ಘೋಷಣೆ ಕೂಗಿ ಜಾಗೃತಿ ಮೂಡಿಸಿ 250 ಜನರಿಗೆ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶಾಂತಮ್ಮ, ಪರ್ವಿನ್, ಹನೀಫ್, ಏಕಾಂತ್, ಆಶಾ ಕಾರ್ಯಕರ್ತೆ ಸಿದ್ದಮ್ಮ, ಶಾಲಾ ಶಿಕ್ಷಕರಾದ ಚಂದ್ರಪ್ಪ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!