Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಗಾಂಗ ದಾನದಲ್ಲಿ ಭಾರತಕ್ಕೆ ಮೂರನೇ ಸ್ಥಾನ..!

Facebook
Twitter
Telegram
WhatsApp

ಅಂಗಾಂಗಗಳ ದಾನದಲ್ಲಿ ಅಮೆರಿಕ ಹಾಗೂ ಚೀನಾ ದೇಶಗಳ ಬಳಿಕ, ಭಾರತ ಮೂರನೇ ಸ್ಥಾನದಲ್ಲಿದೆ. 2012-13 ನೇ ಸಾಲಿಗೆ ಹೋಲಿಸಿದರೆ, ಅಂಗಾಂಗ ದಾನದ ಪ್ರಮಾಣವು ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ವಾರ್ಷಿಕ ಅಂಗಾಂಗ ದಾನಗಳ ಸಂಖ್ಯೆ 2013 ರಲ್ಲಿ 4,990 ಆಗಿದ್ದು, 2019 ರಲ್ಲಿ 12,746 ಕ್ಕೆ ಏರಿದೆ.

ಅಂಗಾಂಗ ದಾನದ ಪ್ರಮಾಣದಲ್ಲಿ ನಾಲ್ಕು ಪಟ್ಟು ಏರಿಕೆ ಕಂಡಿದ್ದರೂ, ಅಂಗಾಂಗಗಳ ಬೇಡಿಕೆಯನ್ನು ಪೂರೈಸಲು ಇನ್ನಷ್ಟು ಹಾದಿಯನ್ನು ಸವೆಸಬೇಕಾಗಿದೆ. ದೇಶದಲ್ಲಿ ಕೇವಲ 3% ಜನರು ಮಾತ್ರ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ, ದೇಶದಲ್ಲಿ 10 ಲಕ್ಷ ಜನರಲ್ಲಿ, 0.65 ಮಂದಿ ಮಾತ್ರ ಅಂಗಾಂಗ ದಾನ ಮಾಡುತ್ತಿದ್ದಾರೆ. ಸ್ಪೇನ್ ನಲ್ಲಿ ಈ ಪ್ರಮಾಣ 35 ಹಾಗೂ ಅಮೆರಿಕದಲ್ಲಿ 26 ರಷ್ಟಿದೆ. ಕೋವಿಡ್-19 ಸಾಂಕ್ರಾಮಿಕದಿಂದ ಭಾರತ ಸೇರಿದಂತೆ ಜಗತ್ತಿನೆಲ್ಲೆಡೆ ಅಂಗಾಂಗ ದಾನದ ಪ್ರಮಾಣ ಇಳಿಕೆಯಾಗಿದೆ. ಆದರೂ ಸಾಂಕ್ರಾಮಿಕಕ್ಕಿಂತ ಹಿಂದೆಯೂ ಅಂಗಾಂಗ ದಾನ ಹೆಚ್ಚಿನ ಪ್ರಮಾಣದಲ್ಲೇನೂ ನಡೆಯುತ್ತಿರಲಿಲ್ಲ.

ಏಮ್ಸ್ ನ 2019 ರ ಅಂಕಿ ಅಂಶದ ಪ್ರಕಾರ, ವಾರ್ಷಿಕವಾಗಿ 1.5 ರಿಂದ 2 ಲಕ್ಷ ಜನರಿಗೆ ಮೂತ್ರಪಿಂಡ ಕಸಿಯ ಅಗತ್ಯವಿದೆ. ಆದರೆ ಈ ಪೈಕಿ 8,000 ಜನರು ಅಂದರೆ 4% ರಷ್ಟು ಮಂದಿ ಮಾತ್ರ ಮೂತ್ರಪಿಂಡ ಪಡೆಯುತ್ತಿದ್ದಾರೆ. ಇದೇ ರೀತಿ ಪ್ರತಿ ವರ್ಷ 80,000 ರೋಗಿಗಳಿಗೆ ಯಕೃತ್ತು (ಲಿವರ್) ಕಸಿ ಅಗತ್ಯವಿದ್ದು, 1,800 ಮಂದಿ ಮಾತ್ರ ಕಸಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿದೆ. ವಾರ್ಷಿಕ ಸುಮಾರು 1 ಲಕ್ಷ ರೋಗಿಗಳಿಗೆ ಕಾರ್ನಿಯಾ ಅಥವಾ ಕಣ್ಣು ಸಂಬಂಧಿತ ಕಸಿ ಅಗತ್ಯವಿದ್ದು, ಅರ್ಧಕ್ಕಿಂತಲೂ ಕಡಿಮೆ ಮಂದಿಗೆ ಇದು ಲಭ್ಯವಾಗುತ್ತಿದೆ. ಹೃದಯ ಕಸಿ ಅಗತ್ಯವಿರುವ 10,000 ರೋಗಿಗಳಲ್ಲಿ 200 ಮಂದಿಗೆ ಮಾತ್ರ ಸರಿಯಾದ ಹೊಂದಾಣಿಕೆಯಾಗಿ ದಾನ ದೊರೆಯುತ್ತಿದೆ.

ಜನರಲ್ಲಿ ಜಾಗೃತಿಯ ಕೊರತೆಯಿಂದಾಗಿ ಅಂಗಾಂಗ ದಾನ ಕಡಿಮೆಯಾಗಿದೆ. ಅಂಗಾಂಗ ದಾನ ಹೆಚ್ಚಿಸಲು ಇಡೀ ಸಮಾಜ, ಜಾಗೃತ ನಾಗರಿಕರು, ವೈದ್ಯರು ಹಾಗೂ ಮಾಧ್ಯಮಗಳು ತಮ್ಮ ಪಾತ್ರ ವಹಿಸಬೇಕಿದೆ. ಈ ಮೂಲಕ ಅಂಗಾಂಗ ದಾನದ ಪ್ರಮಾಣ ಹೆಚ್ಚಿಸಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!