Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

India vs Nepal, Asia Cup 2023 : ನೇಪಾಳ ವಿರುದ್ಧ ಗೆದ್ದ ಭಾರತ : ಸೆಪ್ಟೆಂಬರ್ 10 ರಂದು ಪಾಕ್ ವಿರುದ್ಧ ರೋಚಕ ಕದನ

---Advertisement---

 

ಸುದ್ದಿಒನ್ : 2023ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಸೂಪರ್-4 ಹಂತ ತಲುಪಿದೆ.  ನೇಪಾಳ ವಿರುದ್ಧದ ಪಂದ್ಯದಲ್ಲಿ 10 ವಿಕೆಟ್‌ಗಳ ಜಯದ ನಂತರ ಮೂರು ಅಂಕಗಳೊಂದಿಗೆ ಮುಂದಿನ ಹಂತಕ್ಕೆ ಅರ್ಹತೆ ಪಡೆದಿದೆ.

ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನೇಪಾಳಕ್ಕೆ ಬ್ಯಾಟಿಂಗ್ ಆಡಲು ಬಿಟ್ಟುಕೊಟ್ಟರು. ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದ್ದರಿಂದಾಗಿ ನೇಪಾಳ 48.2 ಓವರ್‌ಗಳಲ್ಲಿ 230 ರನ್‌ಗಳಿಗೆ ಆಲೌಟಾಯಿತು. ಭಾರತದ ಬೌಲರ್‌ಗಳಲ್ಲಿ ರವೀಂದ್ರ ಜಡೇಜಾ 3, ಸಿರಾಜ್ 3, ಶಮಿ 1, ಹಾರ್ದಿಕ್ ಪಾಂಡ್ಯ 1, ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದರು.

ಆ ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ  2.1 ಓವರ್‌ಗಳಲ್ಲಿ 17/0 ರನ್‌ಗಳ ಹಂತದಲ್ಲಿ ಮಳೆಯು ಪಂದ್ಯಕ್ಕೆ ಅಡ್ಡಿಪಡಿಸಿತು. ಬಹಳ ಸಮಯದವರೆಗೂ ಆಟ ಸ್ಥಗಿತಗೊಂಡಿತ್ತು.
ಅಂತಿಮವಾಗಿ, ಮಳೆ ಕಡಿಮೆಯಾಗುತ್ತಿದ್ದಂತೆ ಅಂಪೈರ್‌ಗಳು ಡಕ್‌ವರ್ತ್ ಲೂಯಿಸ್ ನಿಯಮದಂತೆ 23 ಓವರ್‌ಗಳಲ್ಲಿ 145 ರನ್‌ಗಳ ಗುರಿಯನ್ನು ನೀಡಿದರು.

ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ನೇಪಾಳದ ಬೌಲರ್‌ಗಳಿಗೆ ಬೌಂಡರಿ ಹಾಗೂ ಸಿಕ್ಸರ್ ಗಳ ಮೂಲಕ ರನ್ ಗಳ ರುಚಿ ತೋರಿಸಿದರು. 20.1 ಓವರ್‌ಗಳಲ್ಲಿ ಒಂದೇ ಒಂದು ವಿಕೆಟ್‌ ನಷ್ಟವಾಗದೇ ಗುರಿ ತಲುಪಿದರು. ರೋಹಿತ್ ಶರ್ಮಾ (74) ಮತ್ತು ಶುಭಮನ್ ಗಿಲ್ (67) ಔಟಾಗದೆ ಉಳಿದರು.

ಸೂಪರ್-4 ಹಂತ ತಲುಪಿದ ನಂತರ ಭಾರತ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಪಾಕಿಸ್ತಾನವನ್ನು ಎದುರಿಸಲಿದೆ. ಉಳಿದ ಎರಡು ಪಂದ್ಯಗಳು ಸೆಪ್ಟೆಂಬರ್ 12 ಮತ್ತು ಸೆಪ್ಟೆಂಬರ್ 15 ರಂದು ನಡೆಯಲಿದೆ. ಭಾರತ ಈ ಪಂದ್ಯಗಳನ್ನು ಬಿ ಗುಂಪಿನಿಂದ ಸೂಪರ್-4 ಅರ್ಹತೆ ಪಡೆದ ತಂಡಗಳ ವಿರುದ್ಧ ಆಡಲಿದೆ.

ಗ್ರೂಪ್-ಎ ನಿಂದ ಪಾಕಿಸ್ತಾನ ಈಗಾಗಲೇ ಸೂಪರ್-4ಗೆ ಅರ್ಹತೆ ಪಡೆದಿದೆ. ಮತ್ತು ಈ ಪಂದ್ಯದ ಗೆಲುವಿನೊಂದಿಗೆ ಭಾರತ ಕೂಡ ಸೂಪರ್-4ಗೆ ಅರ್ಹತೆ ಪಡೆದಿದೆ. ಇನ್ನು ಗ್ರೂಪ್-ಬಿ ವಿಚಾರಕ್ಕೆ ಬಂದರೆ ಇಲ್ಲಿಯವರೆಗೂ ಅದರಲ್ಲಿ ಒಂದೇ ಒಂದು ತಂಡವೂ ಮುಂದಿನ ಹಂತಕ್ಕೆ ತಲುಪಿಲ್ಲ. ಮಂಗಳವಾರ ನಡೆಯಲಿರುವ ಅಂತಿಮ ಲೀಗ್ ಹಂತದ ಪಂದ್ಯ ಬಿ ಗುಂಪಿನಲ್ಲಿ ಅರ್ಹತೆ ಪಡೆದ ತಂಡಗಳನ್ನು ನಿರ್ಧರಿಸಲಿದೆ.

ಮಂಗಳವಾರ ಅಫ್ಘಾನಿಸ್ತಾನ-ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ 4 ಅಂಕಗಳೊಂದಿಗೆ ಸೂಪರ್-4 ಹಂತ ತಲುಪಲಿದೆ. ಜತೆಗೆ ಬಾಂಗ್ಲಾದೇಶ ಕೂಡ ಮುನ್ನಡೆ ಸಾಧಿಸಲಿದೆ. ಒಂದು ವೇಳೆ ಅಫ್ಘಾನಿಸ್ತಾನ ಗೆದ್ದರೆ ಆಟ ಮತ್ತಷ್ಟು ರೋಚಕವಾಗಿರುತ್ತದೆ. ಆಗ ಮೂರು ತಂಡಗಳ ಪೈಕಿ ಉತ್ತಮ ರನ್ ರೇಟ್ ಹೊಂದಿರುವ ಎರಡು ತಂಡಗಳು ಸೂಪರ್-4 ಹಂತಕ್ಕೆ ಪ್ರವೇಶಿಸಲಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...