ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟಿ20 ವಿಶ್ವಕಪ್ 2024 ಪ್ರಶಸ್ತಿ ಗೆದ್ದು ಭಾರತ ಎರಡನೇ ಬಾರಿಗೆ ಕಿರು ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. 11 ವರ್ಷಗಳ ಐಸಿಸಿ ಪ್ರಶಸ್ತಿ ದಾಹ ತಣಿಸಿತು.
ಇಂದು (ಜೂನ್ 29) ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ 2024 ರ ಫೈನಲ್ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ತಂಡ ವಿಶ್ವಕಪ್ ಗೆದ್ದುಕೊಂಡಿದೆ.
ದಕ್ಷಿಣ ಆಫ್ರಿಕಾ ಕಡೆಯ 5 ಓವರ್ಗಳಲ್ಲಿ 30 ರನ್ ಬೇಕಿತ್ತು. ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್ ರಂತಹ ಅಪಾಯಕಾರಿ ಬ್ಯಾಟ್ಸ್ ಮನ್ ಗಳು ಕ್ರೀಸ್ ನಲ್ಲಿದ್ದರು. ಆ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಗೆಲ್ಲುತ್ತದೆ ಎಂದು ಅನಿಸಿತ್ತು. ಆದರೆ ಭಾರತದ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದರು. ಮೊದಲು ಅವರು ಕ್ಲಾಸೆನ್ ಅವರನ್ನು ಔಟ್ ಮಾಡಿ ದಕ್ಷಿಣ ಆಫ್ರಿಕಾವನ್ನು ಒತ್ತಡಕ್ಕೆ ಸಿಲುಕಿಸಿದರು. ತೀಕ್ಷ್ಣವಾದ ಎಸೆತಗಳನ್ನು ಬೌಲಿಂಗ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ಗಳನ್ನು ಕಂಗಾಲಾಗುವಂತೆ ಮಾಡಿದರು. ಮಧ್ಯದಲ್ಲಿ ವಿಕೆಟ್ ಕಬಳಿಸಿ ಪಂದ್ಯದ ಮೇಲಿನ ಹಿಡಿತ ಸಾಧಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್