Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

Facebook
Twitter
Telegram
WhatsApp

 

ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಬಳಿಕ ಟೀಂ ಇಂಡಿಯಾ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟಾಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ಎರಡನೇ ಓವರ್ ನಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಮಕೇಶ್ ಕುಮಾರ್ ತಮ್ಮ ಮೊದಲ ಎಸೆತದಲ್ಲಿ ವಿಕೆಟ್ ಪಡೆದರು. ಆಗ ಜಿಂಬಾಬ್ವೆ ಬ್ಯಾಟ್ಸ್ ಮನ್ ಗಳು ಪರದಾಡಿದರು. ಬ್ರಿಯಾನ್ ಬೆನೆಟ್ (15 ಎಸೆತಗಳಲ್ಲಿ 22 ರನ್) ಮತ್ತು ಸಿಕಂದರ್ ರಾಜಾ (19 ಎಸೆತಗಳಲ್ಲಿ 17 ರನ್) ಮಾಡಿದರು. ಒಂದು ಹಂತದಲ್ಲಿ ಜಿಂಬಾಬ್ವೆ 90 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡು ನೂರಕ್ಕಿಂತ ಕಡಿಮೆ ರನ್‌ಗಳಿಗೆ ಆಲೌಟ್ ಆಗುವಂತಿತ್ತು. ಆದರೆ ಕೊನೆಯಲ್ಲಿ ಮಂದಾಡೆ (25 ಎಸೆತಗಳಲ್ಲಿ 29) ಹೋರಾಟ ನಡೆಸಿ 115 ರನ್ ಗಳಿಸಿದರು. ಭಾರತದ ಬೌಲರ್‌ಗಳಲ್ಲಿ ರವಿ ಬಿಷ್ಣೋಯ್ 4, ವಾಷಿಂಗ್ಟನ್ ಸುಂದರ್ 2, ಮುಖೇಶ್ ಕುಮಾರ್ 1, ಅವೇಶ್ ಖಾನ್ 1 ವಿಕೆಟ್ ಪಡೆದರು.

ಬಳಿಕ 116 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ ತಂಡಕ್ಕೆ ಆರಂಭದಲ್ಲೇ ಹಿನ್ನಡೆಯಾಯಿತು. ಐಪಿಎಲ್ ನಲ್ಲಿ ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ ಡಕ್ ಔಟ್ ಆಗಿದ್ದರು. ಆ ನಂತರ ರುತುರಾಜ್ ಗಾಯಕ್ವಾಡ್ (7), ರಿಯಾನ್ ಪರಾಗ್ (2), ರಿಂಕು ಸಿಂಗ್ (0) ಮತ್ತು ಧ್ರುವ್ ಜುರೆಲ್ (6) ಕೂಡ ಒಂದೇ ಅಂಕೆಗೆ ಸೀಮಿತರಾದರು. ಇದರಿಂದಾಗಿ 22 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಆದರೆ ನಾಯಕ ಶುಭಮನ್ ಗಿಲ್ (29 ಎಸೆತಗಳಲ್ಲಿ 31 ರನ್) ಹೋರಾಟ ನಡೆಸಿದರು. ನಂತರ ವಾಷಿಂಗ್ಟನ್ ಸುಂದರ್ (34 ಎಸೆತಗಳಲ್ಲಿ 27) ಭಾರತಕ್ಕೆ ಜಯ ತಂದುಕೊಡುವ ಪ್ರಯತ್ನ ಮಾಡಿದರು. ಆದರೆ ಉಳಿದ ಬ್ಯಾಟ್ಸ್‌ಮನ್‌ಗಳು ಮೈದಾನದಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡಲಿಲ್ಲ. ಹಾಗಾಗಿ ಭಾರತ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟಾಯಿತು. 13 ರನ್‌ಗಳಿಂದ ಸೋತಿತು. ಈ ಗೆಲುವಿನೊಂದಿಗೆ ಆತಿಥೇಯ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ : ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ

error: Content is protected !!