Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

---Advertisement---

 

ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಬಳಿಕ ಟೀಂ ಇಂಡಿಯಾ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟಾಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ಎರಡನೇ ಓವರ್ ನಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಮಕೇಶ್ ಕುಮಾರ್ ತಮ್ಮ ಮೊದಲ ಎಸೆತದಲ್ಲಿ ವಿಕೆಟ್ ಪಡೆದರು. ಆಗ ಜಿಂಬಾಬ್ವೆ ಬ್ಯಾಟ್ಸ್ ಮನ್ ಗಳು ಪರದಾಡಿದರು. ಬ್ರಿಯಾನ್ ಬೆನೆಟ್ (15 ಎಸೆತಗಳಲ್ಲಿ 22 ರನ್) ಮತ್ತು ಸಿಕಂದರ್ ರಾಜಾ (19 ಎಸೆತಗಳಲ್ಲಿ 17 ರನ್) ಮಾಡಿದರು. ಒಂದು ಹಂತದಲ್ಲಿ ಜಿಂಬಾಬ್ವೆ 90 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡು ನೂರಕ್ಕಿಂತ ಕಡಿಮೆ ರನ್‌ಗಳಿಗೆ ಆಲೌಟ್ ಆಗುವಂತಿತ್ತು. ಆದರೆ ಕೊನೆಯಲ್ಲಿ ಮಂದಾಡೆ (25 ಎಸೆತಗಳಲ್ಲಿ 29) ಹೋರಾಟ ನಡೆಸಿ 115 ರನ್ ಗಳಿಸಿದರು. ಭಾರತದ ಬೌಲರ್‌ಗಳಲ್ಲಿ ರವಿ ಬಿಷ್ಣೋಯ್ 4, ವಾಷಿಂಗ್ಟನ್ ಸುಂದರ್ 2, ಮುಖೇಶ್ ಕುಮಾರ್ 1, ಅವೇಶ್ ಖಾನ್ 1 ವಿಕೆಟ್ ಪಡೆದರು.

ಬಳಿಕ 116 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ ತಂಡಕ್ಕೆ ಆರಂಭದಲ್ಲೇ ಹಿನ್ನಡೆಯಾಯಿತು. ಐಪಿಎಲ್ ನಲ್ಲಿ ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ ಡಕ್ ಔಟ್ ಆಗಿದ್ದರು. ಆ ನಂತರ ರುತುರಾಜ್ ಗಾಯಕ್ವಾಡ್ (7), ರಿಯಾನ್ ಪರಾಗ್ (2), ರಿಂಕು ಸಿಂಗ್ (0) ಮತ್ತು ಧ್ರುವ್ ಜುರೆಲ್ (6) ಕೂಡ ಒಂದೇ ಅಂಕೆಗೆ ಸೀಮಿತರಾದರು. ಇದರಿಂದಾಗಿ 22 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಆದರೆ ನಾಯಕ ಶುಭಮನ್ ಗಿಲ್ (29 ಎಸೆತಗಳಲ್ಲಿ 31 ರನ್) ಹೋರಾಟ ನಡೆಸಿದರು. ನಂತರ ವಾಷಿಂಗ್ಟನ್ ಸುಂದರ್ (34 ಎಸೆತಗಳಲ್ಲಿ 27) ಭಾರತಕ್ಕೆ ಜಯ ತಂದುಕೊಡುವ ಪ್ರಯತ್ನ ಮಾಡಿದರು. ಆದರೆ ಉಳಿದ ಬ್ಯಾಟ್ಸ್‌ಮನ್‌ಗಳು ಮೈದಾನದಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡಲಿಲ್ಲ. ಹಾಗಾಗಿ ಭಾರತ 19.5 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟಾಯಿತು. 13 ರನ್‌ಗಳಿಂದ ಸೋತಿತು. ಈ ಗೆಲುವಿನೊಂದಿಗೆ ಆತಿಥೇಯ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment