ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಡಿಸೆಂಬರ್.01 : ಇಂದು ರಾಯ್ಪುರ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 20 ರನ್ಗಳ ಜಯ ಸಾಧಿಸಿದೆ.
ಇದರೊಂದಿಗೆ ಭಾರತ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. 175 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಆಸೀಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಮಾತ್ರ ಗಳಿಸಿತು.
ಭಾರತದ ಬೌಲರ್ಗಳಲ್ಲಿ ಅಕ್ಷರ್ ಪಟೇಲ್ ಮೂರು, ದೀಪಕ್ ಚಹಾರ್ ಎರಡು, ರವಿ ಬಿಷ್ಟೋಯ್ ಮತ್ತು ಅವೇಶ್ ಖಾನ್ ತಲಾ ಒಂದು ವಿಕೆಟ್ ಪಡೆದರು.
ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಗಳಲ್ಲಿ ಮ್ಯಾಥ್ಯ ವೇಡ್ (36) ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಪೈಕಿ ರಿಂಕು ಸಿಂಗ್ ಮತ್ತೊಮ್ಮೆ ಅದ್ಭುತ ಇನ್ನಿಂಗ್ಸ್ ಆಡಿದರು.
ರಿಂಕು 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿದರು. ರಿಂಕು ಅವರೊಂದಿಗೆ ಜಿತೇಶ್ ಶರ್ಮಾ (35), ಯಶಸ್ವಿ ಜೈಶ್ವಾಲ್ (37) ಮತ್ತು ರುತುರಾಜ್ ಗಾಯಕ್ವಾಡ್ (32) ರನ್ ಗಳಿಸಿ ಮಿಂಚಿದರು.
ಆಸೀಸ್ ಬೌಲರ್ಗಳ ಪೈಕಿ ಬೆನ್ ದ್ವಾರಶೂಯಿಸ್ ಮೂರು ವಿಕೆಟ್ ಪಡೆದರು.ಜೇಸನ್ ಬೆಹೆಂಡಾರ್ಫ್ ಮತ್ತು ಸಂಗ ತಲಾ ಎರಡು ವಿಕೆಟ್ ಪಡೆದರು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್