ಸುದ್ದಿಒನ್, ಡಿಸೆಂಬರ್.01 : ಇಂದು ರಾಯ್ಪುರ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 20 ರನ್ಗಳ ಜಯ ಸಾಧಿಸಿದೆ.
ಇದರೊಂದಿಗೆ ಭಾರತ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. 175 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಆಸೀಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಮಾತ್ರ ಗಳಿಸಿತು.
ಭಾರತದ ಬೌಲರ್ಗಳಲ್ಲಿ ಅಕ್ಷರ್ ಪಟೇಲ್ ಮೂರು, ದೀಪಕ್ ಚಹಾರ್ ಎರಡು, ರವಿ ಬಿಷ್ಟೋಯ್ ಮತ್ತು ಅವೇಶ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಗಳಲ್ಲಿ ಮ್ಯಾಥ್ಯ ವೇಡ್ (36) ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಪೈಕಿ ರಿಂಕು ಸಿಂಗ್ ಮತ್ತೊಮ್ಮೆ ಅದ್ಭುತ ಇನ್ನಿಂಗ್ಸ್ ಆಡಿದರು.
ರಿಂಕು 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿದರು. ರಿಂಕು ಅವರೊಂದಿಗೆ ಜಿತೇಶ್ ಶರ್ಮಾ (35), ಯಶಸ್ವಿ ಜೈಶ್ವಾಲ್ (37) ಮತ್ತು ರುತುರಾಜ್ ಗಾಯಕ್ವಾಡ್ (32) ರನ್ ಗಳಿಸಿ ಮಿಂಚಿದರು.
ಆಸೀಸ್ ಬೌಲರ್ಗಳ ಪೈಕಿ ಬೆನ್ ದ್ವಾರಶೂಯಿಸ್ ಮೂರು ವಿಕೆಟ್ ಪಡೆದರು.ಜೇಸನ್ ಬೆಹೆಂಡಾರ್ಫ್ ಮತ್ತು ಸಂಗ ತಲಾ ಎರಡು ವಿಕೆಟ್ ಪಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









