Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತೀಯ ಸೇನೆ ಭಯೋತ್ಪಾದಕರನ್ನು ಸದೆ ಬಡಿಯಲಿ :  ಬಡಾಮಕಾನ್‍ನ ದರ್ಗಾದಲ್ಲಿ ಪ್ರಾರ್ಥನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 10 : ಪಹಲ್ಗಾಮ್‍ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆಗೈದಿರುವುದಕ್ಕೆ ಪ್ರತೀಕಾರವಾಗಿ ನಮ್ಮ ದೇಶದ ಸೈನಿಕರು ಉಗ್ರರ ತಂಗುದಾಣಗಳನ್ನು ನಾಶಪಡಿಸಿದ್ದು, ಭಯೋತ್ಪಾದಕರನ್ನು ಸದೆ ಬಡಿಯಲಿ ಎಂದು ಮುಸ್ಲಿಂರು ಬಡಾಮಕಾನ್‍ನ ದರ್ಗಾದಲ್ಲಿ ಶನಿವಾರ ಪ್ರಾರ್ಥನೆ ಸಲ್ಲಿಸಿದರು.

ಸೈಯದ್ ಮೊಹಿದ್ದೀನ್(ಚೋಟು) ಮಾತನಾಡಿ ಭಾರತದ ಯೋಧರಿಗೆ ಉಗ್ರರನ್ನು ಸದೆಬಡಿಯುವಂತ ಶಕ್ತಿ ಕೊಡಲಿ. ಭಾರತದಲ್ಲಿ ಹುಟ್ಟಿ ಇಲ್ಲಿನ ಅನ್ನ, ನೀರು, ಗಾಳಿ ಸೇವಿಸುತ್ತಿರುವ ನಾವುಗಳು ಇಂತಹ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ದರಿದ್ದೇವೆ. ಬೇರೆ ಧರ್ಮವನ್ನು ಪ್ರೀತಿಸುವುದು ಇಸ್ಲಾಂ ಧರ್ಮದ ಧ್ಯೇಯ. ಉಗ್ರಗಾಮಿಗಳು ಇಸ್ಲಾಂಮಿಗಳಲ್ಲ. ಮಾನವ ಕುಲಕ್ಕೆ ಕಂಟಕವಾಗಿರುವ ಉಗ್ರರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ನಮ್ಮ ದೇಶದ ಪ್ರಧಾನಿ ಮೋದಿರವರು ಸಿಂಧೂರ ಆಪರೇಷನ್‍ನಿಂದ ಹಿಂದೆ ಸರಿಯಬಾರದು. ಭಾರತವನ್ನು ಕೆಣಕಿದ ವಿರೋಧಿ ದೇಶ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದರು.

ಧರ್ಮಗುರುಗಳಾದ ಸೈಯದ್ ಶಬ್ಬೀರ್ ಅಶ್ರಫಿ, ತಬ್ರೇಜ್, ಸೈಯದ್ ನೂರ್ ಅಹಮದ್, ಮಹಮದ್ ಯಾಸಿನ್, ಮಹ್ಮದ್ ಸಮೀ, ಸೈಯದ್ ಅಜರ್, ವಸೀಂ, ಉಸ್ಮಾನ್, ಭಾಷ, ಜಬೀವುಲ್ಲಾ, ಮುಜ್ಜು, ಫಹಾದ್, ಶಂಷುದ್ದಿನ್, ಫರ್ಮಾನ್ ಇನ್ನು ಅನೇಕರು ಪ್ರಾರ್ಥನೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...