ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಿರಿಯೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿರುವುದು ಭಾರತೀಯ ಸೈನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಪಹಲ್ಗಾಮ್ ಘಟನೆಯಲ್ಲಿ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ ಉಗ್ರರಿಗೆ ನಮ್ಮ ದೇಶ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ನಾಶಪಡಿಸಿದೆ. ʻಆಪರೇಷನ್ ಸಿಂಧೂರʼ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ ಎಂದರು.
ಪಾಕಿಸ್ತಾನ ಇಲ್ಲಿಗೆ ತನ್ನ ಕೆಟ್ಟ ಚಾಳಿಯನ್ನು ಕೈಬಿಟ್ಟರೆ ಒಳ್ಳೆಯದು. ಇಲ್ಲವಾದರೆ ಇದು ಇನ್ನೂ ಆರಂಭ, ಇಡೀ ಜಗತ್ತೇ ತಿರುಗಿ ನೋಡುವಂತೆ ಅಂತ್ಯ ಇನ್ನು ಘೋರವಾಗಿರುತ್ತದೆ. ಪಾಕಿಸ್ತಾನದ ದೇಶದೊಳಗೆ ನುಗ್ಗಿ, ಉಗ್ರರರನ್ನು ಸೆದೆಬಡಿದಿರುವ ಭಾರತೀಯ ಸೈನಿಕರ ಶಕ್ತಿಯನ್ನು ಅನೇಕ ರಾಷ್ಟ್ರಗಳು ಕೊಂಡಾಡುತ್ತಿದ್ದಾರೆ. ಭಯೋತ್ಪಾದಕತೆಯನ್ನು ಮಟ್ಟ ಹಾಕಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್