ಭಾರತೀಯ ಚಿಕಿತ್ಸಾ ಪದ್ಧತಿ ಹೆಚ್ಚು ಪರಿಣಾಮಕಾರಿ : ಮಹಮ್ಮದ್ ಮನ್ಸೂರ್

ಚಿತ್ರದುರ್ಗ, (ಫೆ.10) ಪ್ರಾಚೀನ ವೈಜ್ಞಾನಿಕ ಪದ್ಧತಿಯಾದ ಸ್ಪಟಿಕ ಚಿಕಿತ್ಸಾ ಶಿಬಿರ ಹಾಗೂ ಸಂಗೀತ ಶಿಬಿರವನ್ನು ನಗರದ ರಿದ್ಧಿ ಫೌಂಡೇಶನ್ ಸಂಸ್ಥೆಯಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು.

ಶಿಬಿರವನ್ನು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎನ್.ಐ. ಮಹಮ್ಮದ್ ಮನ್ಸೂರ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮನ್ಸೂರ್ ಅವರು ಮಾತನಾಡಿ, ಸ್ಪಟಿಕ ಚಿಕಿತ್ಸೆ ಪದ್ಧತಿ ಉಪನಿಷತ್ತಿನಲ್ಲೂ ಉಲ್ಲೇಖವಿದೆ.  ರಾಜ ಮಹಾರಾಜರು ಹಾಗೂ ಮಹಾಭಾರತ, ರಾಮಾಯಣ ಕಾಲದಲ್ಲಿಯೂ ಈ ಚಿಕಿತ್ಸೆಯನ್ನು ಬಳಸುತ್ತಿದ್ದರು.

ಇದೊಂದು ಸರಳ ಮತ್ತು ಸುಲಭದ ಚಿಕಿತ್ಸೆ ಆಗಿದ್ದು, ಧೀರ್ಘಕಾಲದ ಕಾಯಿಲೆಗಳಿಗೆ ಪರಿಣಾಮಕಾರಿಯಾಗಿ ಪರಿಹಾರ ದೊರಕುತ್ತದೆ.  ಆದ್ಧರಿಂದ ಭಾರತೀಯ ಚಿಕಿತ್ಸಾ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಿದೆ. ರಿದ್ಧಿ ಫೌಂಡೇಶನ್ ಸಂಸ್ಥೆ ಅಳವಡಿಸಿರುವುದು ಸ್ವಾಗತಾರ್ಹವಾದದ್ದು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತ್ರಕರ್ತ ಟಿ.ತಿಪ್ಪೇಸ್ವಾಮಿ ಸಂಪಿಗೆ ಮಾತನಾಡಿ, ಭಾರತೀಯ ಸನಾತನ ಔಷಧಿ ಪದ್ಧತಿ ಬಹಳ ಅಮೂಲ್ಯವಾದದ್ದು,   ಈ ಪದ್ಧತಿಗಳ ಬಗ್ಗೆ ಅಧ್ಯಾಯನವಾಗಬೇಕು.  ವೈಜ್ಞಾನಿಕ ತಳಹದಿಯಲ್ಲಿ ಅಳವಡಿಸಿಕೊಂಡು, ರೋಗಿಗಳಿಗೆ ಚಿಕಿತ್ಸೆ ನೀಡಿದರೇ, ಅಧ್ಬುತವಾದ ಪರಿಣಾಮ ಬೀರಲಿದೆ.

ಅದೇ ರೀತಿ ಯೋಗ, ಧ್ಯಾನಗಳಿಂದ ಸಾಕಷ್ಟು ಕಾಯಿಲೆಗಳು ವಾಸಿ ಮಾಡಲು ಸಾಧ್ಯವಾಗಿದೆ.  ವಿಶೇಷವಾಗಿ ಮಾನಸಿಕವಾಗಿ ಸಂಬಂಧಿಸಿದ ಖಾಯಿಲೆಗಳಿಗೆ ಯೋಗ ಮತ್ತು ಧ್ಯಾನಗಳು ಪರಿಣಾಮಕಾರಿಯಾಗಿ ಸಹಕಾರಿಯಾಗಲಿವೆ ಎಂದರು.

ರಿದ್ಧಿ ಸಂಸ್ಥೆಯ ಖಜಾಂಚಿ ಶ್ರೀಮತಿ ಶೋಭ ಮಾತನಾಡಿ, ಇಂದಿನ ಯುವಪೀಳಿಗೆ ಮಾನಸಿಕ ಅಸಮಾನತೋಲನದಿಂದ ಬಳಲುತ್ತಿದೆ.  ಸಣ್ಣ ಸಣ್ಣ ವಿಚಾರಗಳಿಗೂ ಮಾನಸಿಕ ಒತ್ತಡಗಳಿಗೆ ಸಿಲುಕಿ ಬಳಲುತ್ತಾರೆ.

ಎಷ್ಟೋ ಯುವಕರು ಮಾನಸಿಕ ಒತ್ತಡಕ್ಕೆ ಬಲಿಯಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇಂತಹ ಯುವಕರು ಧ್ಯಾನದ ಮೊರೆ ಹೋದರೆ ಮಾನಸಿಕವಾಗಿ ಸದೃಢರಾಗಬಲ್ಲರು.  ಹಾಗೂ ಯುವಕರಿಗೆ ನೈತಿಕ ಶಿಕ್ಷಣ ಕಲ್ಪಿಸುವ ಅಗತ್ಯತೆ ಹೆಚ್ಚು ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಪ್ರಶಸ್ತಿ ಪುರಸ್ಕøತ ಪತ್ರಕರ್ತ ಟಿ.ತಿಪ್ಪೇಸ್ವಾಮಿ ಸಂಪಿಗೆ ಅವರನ್ನು ಸನ್ಮಾನಿಸಲಿ ಗೌರವಿಸಲಾಯಿತು.

ಕಾರ್ಯಕ್ರದ ನಿರೂಪಣೆಯನ್ನು ಮಮತಾ ನಿರ್ವಹಿಸಿದರು. ಸ್ವಾಗತವನ್ನು ಪ್ರಿಯದರ್ಶಿನಿ, ವಂದನಾರ್ಪಣೆಯನ್ನು ಟಿ.ಶಿವರುದ್ರಮ್ಮ ನಿರ್ವಹಿಸಿದರು. ವೇದಿಕೆಯಲ್ಲಿ ನೃತ್ಯ ತರಬೇತಿ ಶಿಕ್ಷಕ ಜಮದಗ್ನಿ ಉಪಸ್ಥಿತರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

45 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago