Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 26 ರಂದು ಭಾರತದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಜನವರಿ.25): ಜಿಲ್ಲಾಡಳಿತ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ 74ನೇ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹಾಗೂ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಘನ ಉಪಸ್ಥಿತಿ ವಹಿಸುವವರು.

ಕೃಷಿ ಸಚಿವರು ಮತ್ತು  ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ಮತ್ತು  ಗಣರಾಜ್ಯೋತ್ಸವದ ಸಂದೇಶ ನೀಡುವರು.

ವಿಶೇಷ ಅಹ್ವಾನಿತರಾಗಿ ವಿಧಾನ ಪರಿಷತ್ ಮುಖ್ಯ ಸಚೇತಕರು ಹಾಗೂ ಸದಸ್ಯರಾದ ಡಾ. ವೈ.ಎ ನಾರಾಯಣಸ್ವಾಮಿ ಆಗಮಿಸುವರು. ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹಿರಿಯೂರು ಶಾಸಕಿ ಪೂರ್ಣಿಮಾ ಕೆ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ ಭಾಗವಹಿಸುವರು.

ಜಿಲ್ಲಾ ಅಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವರ ಸಹಯೋಗದಲ್ಲಿ ಸಂಜೆ 5 ಗಂಟೆಗೆ ಚಿತ್ರದುರ್ಗ ತ.ರಾ.ಸು ರಂಗಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

ಚಿತ್ರದುರ್ಗ | ಬಂಜಾರ ಸಮಾಜದಿಂದ ಗೋವಿಂದ ಕಾರಜೋಳ ಪರ ಮತಯಾಚನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಜಿಲ್ಲಾ ಬಂಜಾರ

ಪ್ರಿಯಾಂಕಾಗಾಂಧಿ ಹೇಳಿಕೆಗೆ ಗೋವಿಂದ ಕಾರಜೋಳ ತಿರುಗೇಟು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24  : ಅಪ್ಪರ್ ಭದ್ರಾ ಯೋಜನೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಸೋನಿಯಾಗಾಂಧಿ ಪುತ್ರಿ ಪ್ರಿಯಾಂಕಾಗಾಂಧಿ ಮಾತನಾಡಿರುವುದು ಸೋಜಿಗದ ಸಂಗತಿ

error: Content is protected !!