Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಡಿಯಾ ಹೆಸರು ಭಾರತ್ ಎಂದು ಬದಲಾವಣೆ : ಜನರನ್ನು ಗೊಂದಲಗೊಳಿಸುವ ಪ್ರಯತ್ನವೆಂದ ಡಿಸಿಎಂ ಡಿಕೆ ಶಿವಕುಮಾರ್

Facebook
Twitter
Telegram
WhatsApp

 

ಬೆಂಗಳೂರು: ಇಂಡಿಯಾ ಹೆಸರು ಭಾರತ್ ಎಂದು ಮಾಡುವ ಬಗ್ಗೆ ಸಾಕಷ್ಟು‌ ಪರ ವಿರೋಧ ಕೇಳಿ ಬಂದಿದೆ. ಇದರ ನಡುವೆ ಈಗಾಗಲೇ ಎನ್ ಸಿ ಇ ಆರ್ ಟಿ ಇಂಡಿಯಾ ಬದಲಿಗೆ ಪಠ್ಯ ಪುಸ್ತಕದಲ್ಲಿ ಭಾರತ್ ಎಂದು ಬದಲಾಯಿಸಲು ಸೂಚನೆ ನೀಡಿದೆ. ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ರೀತಿಯ ಪ್ರಯತ್ನಗಳು ಜನರನ್ನು ಗೊಂದಲಕ್ಕೆ ಸಿಲುಕಿಸುವ ಪ್ರಯತ್ನ ಎಂದು ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಾವೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್, ಇಂಡಿಯನ್ ಫಾರಿನ್ ಸರ್ವೀಸ್ ಅಂತ ಯಾಕೆ ಹೇಳುತ್ತಿದ್ದೀವಿ..? ನಮ್ಮ ಪಾಸ್ ಪೋರ್ಟ್ ನಲ್ಲೂ ರಿಪಬ್ಲಿಕ್ ಆಫ್ ಇಂಡಿಯಾ ಅಂತಾನೇ ಇದೆ. ಅವರು ಭಾರತೀಯರ ಮನಸ್ಸನ್ನು ಏಕೆ ಗೊಂದಲಗೊಳಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇದು ಸಂಪೂರ್ಣವಾಗಿ ಜನ ವಿರೋಧಿ, ಇಂಡಿಯಾ ವಿರೋಧಿಯಾಗಿದೆ ಎಂದಿದ್ದಾರೆ.

 

ನೀವೂ ಭಾರತದ ಇತಿಹಾಸವನ್ನು ಬದಲಾಯಿಸುವುದಕ್ಕೆ ಆಗಲ್ಲ. ಕರ್ನಾಟಕ ಈ ಹಿಂದೆ ಏನಿದೆಯೋ ಅದನ್ನೇ ಮುಂದುವರೆಸುತ್ತದೆ. ಎನ್ ಸಿ ಇ ಆರ್ ಟಿಗೆ ಎನ್ಡಿಎ ಸರ್ಕಾರ ಒತ್ತಡ ಏರುತ್ತಿದೆ. ಇದು ಸಂಪೂರ್ಣವಾಗಿ ತಪ್ಪು. ಹೊಸ ಪಠ್ಯಪುಸ್ತಕ ಮತ್ತು ಅಭಿವೃದ್ಧಿ ಪ್ರಕ್ರಿಯೆಯಲ್ಲಿದೆ. ವಿಷಯಾನುಸಾರ ತಜ್ಞರ ಗುಂಪುಗಳು ಅದಕ್ಕೆ‌ ಸೂಚನೆ ನೀಡುತ್ತಿದ್ದಾರೆ. ಆದ್ದರಿಂದ ವಿಷಯಗಳ ಕುರಿತು ಮಾಧ್ಯಮದಲ್ಲಿ ಆಗುತ್ತಿರುವ ಸುದ್ದಿಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಇದು ಅಕಾಲಿಕ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

error: Content is protected !!