Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತು ಏಕದಿನ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದ ಭಾರತ ತಂಡ…!

Facebook
Twitter
Telegram
WhatsApp

 

ಆಸ್ಟ್ರೇಲಿಯಾ ವಿರುದ್ದ ಇಂದು ನಡೆದ ಎರಡನೇಯ ಏಕದಿನ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಟೀಂ ಇಂಡಿಯಾ ಕೆಟ್ಟ ದಾಖಲೆಯನ್ನೂ ಬರೆದಿದೆ.

ವಿಶಾಖಪಟ್ಟಣದಲ್ಲಿ ಇಂದು (ಭಾನುವಾರ) ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 26 ಓವರ್ ಗಳಲ್ಲಿ 117 ರನ್ ಗಳಿಗೆ ಆಲೌಟಾಯಿತು.

ಬಳಿಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯ ತಂಡ 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 121/0 ರನ್ ಗಳಿಸಿತು. ಕೊನೆಯ ಏಕದಿನ ಪಂದ್ಯ ಬುಧವಾರ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ತಂಡವೊಂದು ಕೇವಲ 11 ಓವರ್‌ಗಳಲ್ಲಿ ಅಥವಾ ಅದಕ್ಕಿಂತ ಕಡಿಮೆ ಓವರ್‌ಗಳಲ್ಲಿ ಏಕದಿನ ಪಂದ್ಯವನ್ನು ಗೆದ್ದಿರುವುದು ಇದೇ ಮೊದಲು.

2019 ರಲ್ಲಿ ಈ ದಾಖಲೆಯು ನ್ಯೂಜಿಲೆಂಡ್ ತಂಡದ ಹೆಸರಿನಲ್ಲಿದೆ. ಆ ವರ್ಷ ಭಾರತ ತಂಡ ನ್ಯೂಜಿಲೆಂಡ್ ಗೆ 93 ರನ್ ಗಳ ಗುರಿ ನೀಡಿತ್ತು. ಆ ತಂಡ 14.4 ಓವರ್ ಗಳಲ್ಲಿ ಅದನ್ನು ಭೇದಿಸಿತ್ತು. ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ 11 ಓವರ್ ಗಳಲ್ಲಿ ಕೆಟ್ಟ ದಾಖಲೆ ಮುರಿದು ಮತ್ತಷ್ಟು ಸುಧಾರಿಸಿದೆ. ಒಟ್ಟಾರೆಯಾಗಿ ಆಸ್ಟ್ರೇಲಿಯಾ ತಂಡಕ್ಕೆ ಇದು ಮೂರನೇ ಅತಿ ದೊಡ್ಡ ಗೆಲುವಾಗಿದೆ. ಭಾರತಕ್ಕೆ ಇದು ಹೀನಾಯ ಸೋಲು.

ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ 8 ಓವರ್ ಬೌಲ್ ಮಾಡಿ 5 ವಿಕೆಟ್ ಪಡೆದರು.ಬ್ಯಾಟಿಂಗ್ ನಲ್ಲಿ ಮಿಚೆಲ್‌ ಮಾರ್ಷ್ (ಔಟಾಗದೇ 66) ಮತ್ತು ಟ್ರಾವಿಸ್ ಹೆಡ್ (ಔಟಾಗದೆ 51) ಅರ್ಧ ಶತಕ ದಾಖಲಿಸಿದರು.

ಭಾರತದ ಪರ ವಿರಾಟ್ ಕೊಹ್ಲಿ (31) ಮಾತ್ರ ಗರಿಷ್ಠ ಸ್ಕೋರರ್ ಆಗಿದ್ದರು. ಭಾರತದ ಯಾವುದೇ ಬೌಲರ್‌ಗಳು ಕನಿಷ್ಠ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!