Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಜೀರ್ಣ : ಲಿವರ್ ಕ್ಯಾನ್ಸರ್ ಗೆ ಕಾರಣವಾಗಬಹುದು : ರೋಗ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ…!

Facebook
Twitter
Telegram
WhatsApp

 

ಕೆಲವೊಮ್ಮೆ ದೇಹದಲ್ಲಾಗುವ ಬದಲಾವಣೆಗಳನ್ನು ನಾವೂ ನಿರ್ಲಕ್ಷ್ಯ ಮಾಡ್ತೇವೆ. ಆದ್ರೆ ಆ ನಿರ್ಲಕ್ಷ್ಯ ಮತ್ತೆ ಇನ್ಯಾವುದೋ ಕಾಯಿಲೆಗೆ ತಿರುಗಿಕೊಳ್ಳುತ್ತೆ. ಹೀಗಾಗಿ ರೋಗ ಲಕ್ಷಣಗಳನ್ನು ಮೊದಲೇ ಅರಿತುಕೊಳ್ಳುವುದು ಉತ್ತಮ. ಕೆಲವೊಂದು ಸಲ ಗ್ಯಾಸ್ಟ್ರಿಕ್‌ ಅಂತ ನೆಗ್ಲೆಕ್ಟ್ ಮಾಡುವುದರಿಂದ ದೇಹದ ಮೇಲೆ ಇನ್ಯಾವುದೋ ಪರಿಣಾಮ ಬೀರುತ್ತದೆ.

* ಮೊದಲಿಗೆ ನಾವೆಲ್ಲ ತಿಳಿದುಕೊಳ್ಳಬೇಕಾಗಿರುವುದು ನಾವೂ ಯಾವುದನ್ನು ನಿರ್ಲಕ್ಷ್ಯ ಮಾಡಬಾರದು. ಅದರಲ್ಲೂ ಊಟವಾದ ಮೇಲೆ ಜೀರ್ಣವಾಗದೆ ಇರುವುದನ್ನು ನಿರ್ಲಕ್ಷ್ಯ ಮಾಡಬಾರದು. ಜೀರ್ಣಶಕ್ತಿ ಆಗದೆ ಇದ್ದಲ್ಲಿ ಬೇರೆ ಬೇರೆ ಕಾಯಿಲೆಗಳು ಕಾಣಿಸಿಕೊಳ್ಳುವುದಕ್ಕೆ ಆರಂಭಿಸುತ್ತದೆ. ಲಿವರ್ ಕ್ಯಾನ್ಸರ್ ಗೂ ಕಾರಣವಾಗುತ್ತದೆ.

* ಲಿವರ್ ಕ್ಯಾನ್ಸರ್ ನ ರೋಗ ಲಕ್ಷಣಗಳು ಅಜೀರ್ಣತೆಯ ಸಮಸ್ಯೆ ಕಂಡಂತೆ ಕಾಣುತ್ತವೆ. ಹೀಗಾಗಿ ನಿರ್ಲಕ್ಷ್ಯ ಮಾಡುವುದು ಬೇಡ. ಆಹಾರ ಸೇವನೆ ಮಾಡಿದ ಕೂಡಲೇ ವಾಕರಿಕೆ ಬರುವುದು, ವಾಂತಿಯಾಗುವುದು ಈ ರೋಗ ಲಕ್ಷಣವಾಗಿರುತ್ತದೆ. ಈ ರೀತಿಯೆಲ್ಲಾ ಆಗುತ್ತಿದ್ದರೆ ಮೊದಲು ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ.

* ಇದ್ದಕ್ಕಿದ್ದಂತೆ ದೇಹದ ತೂಕ ಕಡಿಮೆಯಾಗುವುದು, ಹೊಟ್ಟೆ ಹಸಿವು ಇಲ್ಲದೇ ಇರುವುದು, ಲಿವರ್ ದೊಡ್ಡ ದಾಗುವುದು, ಹೊಟ್ಟೆಯ ಭಾಗದಲ್ಲಿ ನೋವು ಕಂಡುಬರುವುದು, ಜಾಂಡಿಸ್ ಸಮಸ್ಯೆ ಎದುರಾಗುವುದು, ಚರ್ಮದ ಭಾಗ ದಲ್ಲಿ ಕೆರೆತ ಕಾಣಿಸುವುದು ಇನ್ನಿತರ ರೋಗ ಲಕ್ಷಣಗಳನ್ನು ಕಾಣಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!