Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಲೇಜು ಮತ್ತು ವಿವಿಗಳಲ್ಲೂ ಇನ್ಮುಂದೆ ಇಂದಿರಾ ಕ್ಯಾಂಟೀನ್ ಆರಂಭ

---Advertisement---

 

ಬೆಂಗಳೂರು: ಇಂದಿರಾ ಕ್ಯಾಂಟೀನ್ ಆರಂಭವಾದ ಮೇಲೆ ಅದೆಷ್ಟೋ ಜನರಿಗೆ ಹೊಟ್ಟೆ ತುಂಬಿದೆ. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಇಂಥ ಮಹಾನಗರ ಬೆಂಗಳೂರಿನಲ್ಲಿ ಸಿಕ್ಕದರೆ ಅದಕ್ಕಿಂತ ಸಂತಸದ ವಿಚಾರ ಇನ್ನೆಲ್ಲಿರುತ್ತೆ ಹೇಳಿ. ಇದೀಗ ಈ ಯೋಜನೆಯನ್ನು ಕಾಲೇಜು ಮತ್ತು ವಿವಿಗಳಿಗೂ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.

ಸಿದ್ದರಾಮಯ್ಯ ಸರ್ಕಾರವಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆ ಹಸಿದವರಿಗೆ ಸುಲಭವಾಗಿ ಅನ್ನ ಸಿಗಲಿ ಎಂಬ ಯೋಜನೆ. ಇದೀಗ ಮತ್ತೆ ಸಿದ್ದರಾಮಯ್ಯ ಸರ್ಕಾರವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಈ ಯೋಜನೆಗೆ ಮತ್ತಷ್ಟು ಮಹತ್ವ ನೀಡಲು ಮುಂದಾಗಿದ್ದಾರೆ.

2017 ರಲ್ಲಿ ಜಾರಿಗೆ ತಂದ ಈ ಯೋಜನೆಯೂ ಇಂದಿಗೂ ಯಶಸ್ವಿಯಾಗಿ ಬಡವರ ಹಸಿವು ನೀಗಿಸುತ್ತಿದೆ. ಯುವ ಪಡೆಯಿಂದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸರ್ಕಾರಿ ಕಾಲೇಜು, ವಿವಿಗಳಲ್ಲೂ ತರುವಂತೆ ಅಭಿಯಾನ ಆರಂಭವಾಗಿದೆ. ಈ ಅಭಿಯಾನ ಸಿಎಂ ಸಿದ್ದರಾಮಯ್ಯ ಗಮನಕ್ಕೂ ಬಂದಿದ್ದು, ಅಭಿಯಾನ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲನ್ನು ಕೂಡ ಸಿಎಂ ಪರಿಶೀಲನೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ವಿವಿ, ಕಾಲೇಜುಗಳಲ್ಲಿ ಕ್ಯಾಂಟೀನ್ ಅಗತ್ಯತೆಯ ಬಗ್ಗೆ ಪರಿಶೀಲನೆ ಮಾಡಲು ತಿಳಿಸಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ಕಾಲೇಜು, ವಿವಿಗಳಿಗೆ ಬರುವ ಮಕ್ಕಳು ಸುತ್ತ ಮುತ್ತಲಿನ ಹಳ್ಳಿಗಳಿಂದಾನೇ ಬಂದಿರುತ್ತಾರೆ. ಒಂದು ಹಣದ ಕೊರತೆಯೂ ಇರುತ್ತದೆ, ಮತ್ತೊಂದು ದೂರದೂರುಗಳಿಗೆ ಹೋಗಬೇಕಾಗಿರುತ್ತದೆ. ಹೀಗಾಗಿ ಕಾಲೇಜು ಮತ್ತು ವಿವಿಗಳಲ್ಲಿ ಇಂದಿರಾ ಕ್ಯಾಂಟೀನ್ ಮಾಡಿದರೆ ಸಾಕಷ್ಟು ಮಕ್ಕಳಿಗೆ ಇದರಿಂದ ಪ್ರಯೋಜನವಾಗುವುದಂತು ಸತ್ಯ. ಹೀಗಾಗಿಯೇ ಯುವ ಪಡೆ ಅಭಿಯಾನವನ್ನು ಆರಂಭಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment