Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀನಾಬೋರಾ ಕೊಲೆಗೆ ಹೊಸ ಟ್ವಿಸ್ಟ್ : ಕೊಲೆಯಾದ ಮಗಳು ಬದುಕಿದ್ದಾಳೆಂದ ಇಂದ್ರಾಣಿ‌ ಮುಖರ್ಜಿ..!

Facebook
Twitter
Telegram
WhatsApp

 

ನವದೆಹಲಿ: ಮಗಳ ಕೊಲೆ ಆರೋಪದಲ್ಲಿ 2012ರಿಂದಲೂ ಜೈಲು ವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಝರ್ಜಿ, ಇದೀಗ ಅದೇ ಮಗಳು ಬದುಕಿದ್ದಾಳೆಂದು ಸಿಬಿಐಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ನನ್ನ ಮಗಳು ಶೀನಾಬೋರಾ ಸತ್ತಿಲ್ಲ, ಕಾಶ್ಮೀರದಲ್ಲಿ ಇದ್ದಾಳೆಂದು ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಶೀನಾಬೋರಾ ಬದುಕಿರುವ ಬಗ್ಗೆ ತನಿಖೆ ನಡೆಸಿ.‌ ಮಗಳು ಬದುಕಿದ್ದಾಳೆ, ಆಕೆ ಕಾಶ್ಮೀರದಲ್ಲಿ ಜೀವಿಸುತ್ತಿದ್ದಾಳೆಂದು ಸಹ ಕೈದಿ ಹೇಳಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನವೆಂಬರ್ 27 ರಂದೇ ಇಂದ್ರಾಣಿ ಮುಖರ್ಜಿ ಪತ್ರ ಬರೆದಿದ್ದಾರೆ. ಮಗಳ ಬಗ್ಗೆ ಹೇಳಿರುವ ಸಹ ಕೈದಿಯನ್ನ ನಾನು ಜೈಲಿನಲ್ಲೆ ಭೇಟಿಯಾಗಿದ್ದೆ. ಆಕೆ ನನ್ನ ಮಗಳು ಶೀನಾಬೋರಾಳನ್ನ ಕಾಶ್ಮೀರದಲ್ಲಿ ನೋಡಿದ್ದಾರಂತೆ ಎಂದಿದ್ದಾರೆ.

ಇಂದ್ರಾಣಿ ಮುಖರ್ಜಿ ತನ್ನ ಮೊದಲ ಗಂಡನ ಮಗಳನ್ನ ಕೊಲೆ‌ಮಾಡಿದ ಆರೋಪದ ಮೇಲೆ ಜೈಲಿನಲ್ಲಿದ್ದಾಳೆ. ಆಕೆಗೆ ಸಹಾಯ ಮಾಡಿದ್ದಕ್ಕಾಗಿ ಎರಡನೇ ಗಂಡ ಪೀಟರ್ ಮುಖರ್ಜಿಯನ್ನು ಬಂಧಿಸಲಾಗಿತ್ತು. ಆದ್ರೆ ಇಬ್ಬರು ಜೈಲಿನಲ್ಲೇ ವಿಚ್ಛೇದನ ಕೂಡ ಪಡೆದಿದ್ದಾರೆ. ಪೀಟರ್ ಮುಖರ್ಜಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದ್ರಾಣಿ ಮುಖರ್ಜಿ ಇನ್ನು ಜೈಲಿನಲ್ಲೇ ಇದ್ದು, ಅವರ ಪರ ವಕೀಲರು ಜಾಮೀನಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!