Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಫ್‌; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.18) : ಮುರುಘಾ ಶರಣರ ಆಶಯದಂತೆ ಜಿಲ್ಲೆಯಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಇಂಡಸ್ಟ್ರೀಯಲ್‌ ಟೌನ್‌ಶಿಫ್‌ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುರುಘಾ ಮಠದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ, ಗುರು ವಂದನೆ ಸಮಾರಂಭದಲ್ಲಿ ಬಸವ ಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಇಂಡಸ್ಟ್ರೀಯಲ್ ಟೌನ್‍ಶಿಪ್ ಮಾಡಲು ಸಿದ್ದನಿದ್ದೇನೆ. ಜಿಲ್ಲಾಧಿಕಾರಿಗಳು ಚಿತ್ರದುರ್ಗದಲ್ಲಿ 1 ಸಾವಿರದಿಂದ 2 ಸಾವಿರ ಎಕರೆ ಭೂಮಿಯನ್ನು ಗುರುತಿಸಿದರೆ ನಾನು ಈ ಕಾರ್ಯ ಮಾಡಲು ಸಿದ್ದನಿದ್ದೇನೆ.

ಸುವರ್ಣ ಕರ್ನಾಟಕ ಕಟ್ಟಬೇಕು ಎಂಬ ಸಂಕಲ್ಪ ಮಾಡಿದ್ದೇನೆ.  ಸುಭೀಕ್ಷ, ಸುರಕ್ಷಿತ ಕರ್ನಾಟಕವನ್ನು, ಸಮಾನತೆಯ ದಿನಾಚರಣೆಯನ್ನು ಸರ್ಕಾರ ವತಿಯಿಂದ ಕಾರ್ಯಕ್ರಮ ಮಾಡುತ್ತೇನೆ ಎಂದು ತಿಳಿಸಿದರು. ಇದು ಕರಾರು ರಹಿತ ಪ್ರೀತಿ, ಭಕ್ತಿಯನ್ನು ಸಮರ್ಪಣಾ ಭಾವದಿಂದ ಮಾಡಬೇಕು. ವೈಚಾರಿಕ ಕ್ರಾಂತಿಯೇ ಶರಣ ಸಂಸ್ಕೃತಿ, ಮನುಷ್ಯರನ್ನು ಮನುಷ್ಯರಾಗಿ ನೋಡುವುದೇ ಶರಣ ಸಂಸ್ಕೃತಿ.  12ನೇ ಶತಮಾನದ ಪ್ರತಿಪಾದನೆಯನ್ನು ಶ್ರೀಗಳು ಮಾಡುತ್ತಿದ್ದಾರೆ. ಈಗ 21ನೇ ಶತಮಾನ, ಅಂಕಿಗಳು ತಿರುಗುಮುರುಗಾಗಿವೆ.  ಮನುಕುಲದ ಅಭಿವೃದ್ದಿಯಾಗಬೇಕು. ಬಸವಣ್ಣ ಇಂದಿಗೂ ಪ್ರಸ್ತುತ. ಅಸಮಾನತೆ, ಲಿಂಗಬೇದ ಇಂದಿಗೂ ಇದೆ.

ಸಂಪೂರ್ಣವಾಗಿ ಇದನ್ನು ತೊಲಗಿಸುವ ಜವಾಬ್ದಾರಿ ಶರಣರಿಂದ ಪ್ರಾರಂಭವಾಗಿದೆ.  ಇದನ್ನು ಎಲ್ಲರು ಮುಂದುವರಿಸಿಕೊಂಡು ಹೋಗುವುದು ಜನಸಾಮಾನ್ಯರ ಕರ್ತವ್ಯವಾಗಬೇಕು.  ಮೌಢ್ಯಗಳು ತಮಗೆ ದುಃಖ ಉಂಟು ಮಾಡಿವೆ.. ಸಾಮಾಜಿಕ ಸಮಾನತೆ ಸಂತೋಷವನ್ನು ಉಂಟು ಮಾಡಿದೆ ಎಂದರು.

ಬಿ.ಎಸ್‌.ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಹೋರಾಟದ ಮನೋಭಾವ ಹೊಂದಿದ್ದರು. ಅಧಿಕಾರಕ್ಕೆ ಬಂದಾಗ ಅವುಗಳನ್ನು ಕಾರ್ಯರೂಪಕ್ಕೆ ತಂದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಆರಂಭಿಸಿ ಬರದ ನಾಡಾದ ಚಿತ್ರದುರ್ಗಕ್ಕೆ ನೀರಾವರಿ ಸೌಲಭ್ಯವನ್ನು ಹರಿಸಲು ನೆರವಾಗಿದ್ದಾರೆ. ಇದೊಂದು ಜನಪರ ಕೆಲಸ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!