Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾತಿ ಗಣತಿ : ಲಂಬಾಣಿ ಎಂದು ಬರೆಸಿ : ಎಂ.ಸತೀಶ್‍ಕುಮಾರ್ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 08 : ರಾಜ್ಯ ಸರ್ಕಾರ ಆರಂಭಿಸಿರುವ ಒಳ ಮೀಸಲಾತಿ ಗಣತಿಗೆ ಅಧಿಕಾರಿಗಳು ತಾಂಡಾಗಳಿಗೆ ಭೇಟಿ ನೀಡುತ್ತಿದ್ದು, ಬಿಳಿ ಹಾಳೆ ಮೇಲೆ ದತ್ತಾಂಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮೊಬೈಲ್ ಆಪ್ ಮೂಲಕ ಗಣತಿಯಾಗಬೇಕೆಂದು ಬಂಜಾರ(ಲಂಬಾಣಿ) ಸಮಾಜದ ಜಿಲ್ಲಾಧ್ಯಕ್ಷ ಎಂ.ಸತೀಶ್‍ಕುಮಾರ್ ಒತ್ತಾಯಿಸಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಬುಧವಾರ ಬಂಜಾರ(ಲಂಬಾಣಿ) ಜನಾಂಗದ ಸಭೆ ನಡೆಸಿ ಮಾತನಾಡಿದರು.‌ ಒಳ ಮೀಸಲಾತಿ ಸಮೀಕ್ಷೆಗೆ ಆಯೋಗವನ್ನು ಸರ್ಕಾರ ಕಳಿಸಿರುವುದು ಸ್ವಾಗತಾರ್ಹ. ಆದರೆ ಸರ್ವರ್ ಇಲ್ಲ ಎನ್ನುವ ನೆಪ ಹೇಳಿ ಕಾಗದದ ಮೇಲೆ ಮಾಹಿತಿ ಪಡೆದುಕೊಳ್ಳುವುದು ವೈಜ್ಞಾನಿಕ ಕ್ರಮವಲ್ಲ. ತಾಂಡಾಗಳಲ್ಲಿ ಲಂಬಾಣಿ ಜನಾಂಗ ಎಚ್ಚೆತ್ತುಕೊಂಡು ಮೊಬೈಲ್ ಆಪ್ ಮೂಲಕವೇ ಗಣತಿಯಾಬೇಕೆಂದು ಪಟ್ಟು ಹಿಡಿಯಬೇಕೆಂದು ಜಾಗೃತಿಗೊಳಿಸಿದರು.

ತಾಂಡಾಗಳಲ್ಲಿ ಗಣತಿಗೆ ಹೋಗುವ ಅಧಿಕಾರಿಗಳು ದಿಕ್ಕುತಪ್ಪಿಸುತ್ತಿದ್ದಾರೆಂದು ಸಾಕಷ್ಟು ಕರೆಗಳು ಬರುತ್ತಿವೆ. ಸರ್ವರ್ ಇಲ್ಲ ಎಂದು ಯಾವುದೇ ಕಾರಣಕ್ಕೂ ಹೇಳುವಂತಿಲ್ಲ. ಕೂಲಿಗಾಗಿ ವಲಸೆ ಹೋಗಿರುವ ಬಂಜಾರ ಜನಾಂಗ ತಮ್ಮ ತಮ್ಮ ತಾಂಡಾಗಳಿಗೆ ಹಿಂದಿರುಗಿ ಒಳ ಮೀಸಲಾತಿ ಜಾತಿ ಗಣತಿಯಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ನಿಖರವಾದ ಅಂಕಿ ಅಂಶಗಳನ್ನು ನೀಡುವಂತೆ ಎಂ.ಸತೀಶ್‍ಕುಮಾರ್ ವಿನಂತಿಸಿದರು.

ಕದರೇಶ್, ಸಂತೋಷ್, ಗಿರೀಶ್, ಓಂಕಾರ್‍ನಾಯ್ಕ, ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್, ಕೂಬ್ಯಾನಾಯ್ಕ, ಪ್ರದೀಪ್ ಇವರುಗಳು ಸಭೆಯಲ್ಲಿ ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...