ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ನಗರದ ಜನನಿಬಿಡ ಪ್ರದೇಶಗಳಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ನಗರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಅಳವಡಿಸಿರುವ ಕ್ಯಾಮರಾಗಳು ಬಹುತೇಕ ಕೆಟ್ಟು ಹೋಗಿದ್ದು, ಒಂಟಿ ಹೆಣ್ಣು ಮಕ್ಕಳ ಸರಗಳ್ಳತನ ಜಾಸ್ತಿಯಾಗುತ್ತಿದೆ. ಮನೆಯಿಂದ ಕಸ ತಂದು ಬೀದಿಗೆ ಸುರಿಯುವವರು ಹೆಚ್ಚಾಗಿದ್ದಾರೆ. ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ. ಅನೇಕ ಕಡೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಳ್ಳತನ, ಸುಲಿಗೆ, ಸರಗಳ್ಳತನ ಹೆಚ್ಚುತ್ತಿದ್ದರೂ ಸಿ.ಸಿ.ಕ್ಯಾಮರಾಗಳು ಇಲ್ಲದ ಕಾರಣ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಚಂದ್ರವಳ್ಳಿ ಕ್ರಾಸ್ನಲ್ಲಿ ರಾಶಿಗಟ್ಟಲೆ ಕಸ ಸುರಿಯುತ್ತಿರುವುದನ್ನು ವಿರೋಧಿಸಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಧರಣಿ ನಡೆಸಲಾಗಿತ್ತು. ಇದುವರೆವಿಗೂ ಕ್ರಮ ಕೈಗೊಂಡಿಲ್ಲ. ಶಾಲಾ-ಕಾಲೇಜು ಮುಂಭಾಗ, ಆಸ್ಪತ್ರೆ, ಬಸ್ನಿಲ್ದಾಣ, ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ
ಕೆ.ಟಿ.ಶಿವಕುಮಾರ್ ಪೌರಾಯುಕ್ತರನ್ನು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷ ಮುಜಾಹಿದ್, ಹರಿಶ್ಕುಮಾರ್ ಸಿ.ಆರ್.
ಜಗದೀಶ್ ವಿ. ಅಖಿಲೇಶ್, ವಿಜಯಬಾಬು, ಅವಿನಾಶ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







