Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ : ಲೇನ್ ಡಿಸಿಪ್ಲೀನ್ ನಿಯಮ ಉಲ್ಲಂಘಿಸಿದರೆ ದಂಡ…!

---Advertisement---

 

ಚಿತ್ರದುರ್ಗ,(ಮಾರ್ಚ್.14) : ಚಿತ್ರದುರ್ಗದ ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.

ಡಿ.ಜಿ ಮತ್ತು ಐ.ಜಿ.ಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ ನಂಬರ್ ಪ್ಲೇಟ್ ರೆಕಾಗ್ನೇಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪ್ರಾಯೋಗಾರ್ಥವಾಗಿ ಚಿತ್ರದುರ್ಗ, ದಾವಣಗೆರೆ, ಹಾವೇರಿಗಳಲ್ಲಿ ಕಾರ್ಯಾರಂಭ ಮಾಡಿದ್ದು, ಅದರಂತೆ ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳನ್ನು ಅಳವಡಿಸಿದ್ದು, ಮಾರ್ಚ್ 12 ರಿಂದ ಕಾರ್ಯನಿರ್ವಹಿಸುತ್ತಿರುತ್ತವೆ.

ಹೆದ್ದಾರಿಯ ಬಲಭಾಗದ ರಸ್ತೆಯನ್ನು ವೇಗವಾಗಿ ಚಲಿಸುವ ವಾಹನಗಳಿಗೆ ಮೀಸಲಿರಿಸಲಾಗಿದೆ. ಭಾರೀ ವಾಹನಗಳನ್ನು ಬಲಭಾಗದ ರಸ್ತೆಯಲ್ಲಿ ಚಲಿಸುವಂತಿಲ್ಲ. ವಾಹನಗಳು ವೇಗಕ್ಕನುಸಾರವಾಗಿ ರಸ್ತೆಯ ಎಡ ಮತ್ತು ಮಧ್ಯದ ಮಾರ್ಗವನ್ನು ಬಳಸುವುದು. ಈ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ನಿಯಮ ಉಲ್ಲಂಘಿಸಿದ ಸ್ಥಳದಿಂದ ಮುಂದೆ ಬರುವ ಟೋಲ್‍ಗಳಲ್ಲಿ ರೂ.500 ದಂಡ ವಿಧಿಸಲಾಗುವುದು.

ಒಂದು ವೇಳೆ ಟೋಲ್‍ನಲ್ಲಿ ದಂಡ ಕಟ್ಟಲು ತಪ್ಪಿಸಿಕೊಳ್ಳಲು ಬೇರೆ ಮಾರ್ಗ ಬಳಸಿ ಹೋದರೂ ಸಹ ಮುಂದಿನ ದಿನಗಳಲ್ಲಿ ಯಾವುದೇ ಟೋಲ್ ದಾಟುವ ಸಂದರ್ಭದಲ್ಲಿ ಅಥವಾ ಈ ತಂತ್ರಾಂಶವು ಸಾರಿಗೆ ಇಲಾಖೆಯ ತಂತ್ರಾಂಶದೊಂದಿಗೆ ಸಂಯೋಜನೆ ಹೊಂದಿರುವುದರಿಂದ ವಾಹನಕ್ಕೆ ಸಂಬಂಧಿಸಿದಂತೆ ಯಾವುದೇ ಕೆಲಸ ಕಾರ್ಯಗಳಿಗೆ ಆರ್‍ಟಿಓ ಕಚೇರಿಗೆ ಹೋದಾಗ ದಂಡ ವಿಧಿಸಲಾಗುವುದು.

ಭಾರೀ ವಾಹನಗಳನ್ನು ಚಾಲನೆ ಮಾಡುವ ಚಾಲಕರು ಲೇನ್ ಡಿಸಿಪ್ಲೀನ್ ನಿಯಮದಂತೆ ವಾಹನಗಳನ್ನು ಚಾಲನೆ ಮಾಡುವ ಮೂಲಕ ಸುರಕ್ಷಿತವಾಗಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...