Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ : ಲೇನ್ ಡಿಸಿಪ್ಲೀನ್ ನಿಯಮ ಉಲ್ಲಂಘಿಸಿದರೆ ದಂಡ…!

Facebook
Twitter
Telegram
WhatsApp

 

ಚಿತ್ರದುರ್ಗ,(ಮಾರ್ಚ್.14) : ಚಿತ್ರದುರ್ಗದ ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.

ಡಿ.ಜಿ ಮತ್ತು ಐ.ಜಿ.ಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ ನಂಬರ್ ಪ್ಲೇಟ್ ರೆಕಾಗ್ನೇಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪ್ರಾಯೋಗಾರ್ಥವಾಗಿ ಚಿತ್ರದುರ್ಗ, ದಾವಣಗೆರೆ, ಹಾವೇರಿಗಳಲ್ಲಿ ಕಾರ್ಯಾರಂಭ ಮಾಡಿದ್ದು, ಅದರಂತೆ ಚಿತ್ರದುರ್ಗದ ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳನ್ನು ಅಳವಡಿಸಿದ್ದು, ಮಾರ್ಚ್ 12 ರಿಂದ ಕಾರ್ಯನಿರ್ವಹಿಸುತ್ತಿರುತ್ತವೆ.

ಹೆದ್ದಾರಿಯ ಬಲಭಾಗದ ರಸ್ತೆಯನ್ನು ವೇಗವಾಗಿ ಚಲಿಸುವ ವಾಹನಗಳಿಗೆ ಮೀಸಲಿರಿಸಲಾಗಿದೆ. ಭಾರೀ ವಾಹನಗಳನ್ನು ಬಲಭಾಗದ ರಸ್ತೆಯಲ್ಲಿ ಚಲಿಸುವಂತಿಲ್ಲ. ವಾಹನಗಳು ವೇಗಕ್ಕನುಸಾರವಾಗಿ ರಸ್ತೆಯ ಎಡ ಮತ್ತು ಮಧ್ಯದ ಮಾರ್ಗವನ್ನು ಬಳಸುವುದು. ಈ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ನಿಯಮ ಉಲ್ಲಂಘಿಸಿದ ಸ್ಥಳದಿಂದ ಮುಂದೆ ಬರುವ ಟೋಲ್‍ಗಳಲ್ಲಿ ರೂ.500 ದಂಡ ವಿಧಿಸಲಾಗುವುದು.

ಒಂದು ವೇಳೆ ಟೋಲ್‍ನಲ್ಲಿ ದಂಡ ಕಟ್ಟಲು ತಪ್ಪಿಸಿಕೊಳ್ಳಲು ಬೇರೆ ಮಾರ್ಗ ಬಳಸಿ ಹೋದರೂ ಸಹ ಮುಂದಿನ ದಿನಗಳಲ್ಲಿ ಯಾವುದೇ ಟೋಲ್ ದಾಟುವ ಸಂದರ್ಭದಲ್ಲಿ ಅಥವಾ ಈ ತಂತ್ರಾಂಶವು ಸಾರಿಗೆ ಇಲಾಖೆಯ ತಂತ್ರಾಂಶದೊಂದಿಗೆ ಸಂಯೋಜನೆ ಹೊಂದಿರುವುದರಿಂದ ವಾಹನಕ್ಕೆ ಸಂಬಂಧಿಸಿದಂತೆ ಯಾವುದೇ ಕೆಲಸ ಕಾರ್ಯಗಳಿಗೆ ಆರ್‍ಟಿಓ ಕಚೇರಿಗೆ ಹೋದಾಗ ದಂಡ ವಿಧಿಸಲಾಗುವುದು.

ಭಾರೀ ವಾಹನಗಳನ್ನು ಚಾಲನೆ ಮಾಡುವ ಚಾಲಕರು ಲೇನ್ ಡಿಸಿಪ್ಲೀನ್ ನಿಯಮದಂತೆ ವಾಹನಗಳನ್ನು ಚಾಲನೆ ಮಾಡುವ ಮೂಲಕ ಸುರಕ್ಷಿತವಾಗಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!