Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್‍ಟಿ ಹಾಗೂ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ : ಏನಿದು ನಿಯಮ…!

---Advertisement---

 

ಚಿತ್ರದುರ್ಗ. ಜುಲೈ04 : ಸಾರ್ವಜನಿಕ ಸೇವೆಯ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಾಣಿಕೆ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಹಾಗೂ ಎಮರ್ಜನ್ಸಿ ಪ್ಯಾನಿಕ್ ಬಟನ್‍ನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸಾರಿಗೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ 2024 ಸೆಪ್ಟೆಂಬರ್ 10ರ ವರೆಗೆ ಉಪಕರಣಗಳನ್ನು ಅಳವಡಿಸಕೊಳ್ಳಬೇಕಿದೆ. ಇದರೊಂದಿಗೆ ಆಂಬುಲೇನ್ಸ್‍ಗಳಲ್ಲಿ ಜಿಪಿಎಸ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಉಚ್ಛನ್ಯಾಯಾಲಯದ ಆದೇಶದಂತೆ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳಲ್ಲಿ ವಿಶೇಷ ಚೇತನರಿಗೆ ಪ್ರಯಾಣಯಕ್ಕೆ ಅನುಕೂವಾಗುವಂತೆ ಹತ್ತುವ ಮತ್ತು ಇಳಿಯುವ ವಿಶೇಷ ವ್ಯವಸ್ಥೆ ಹಾಗೂ ಅಂಧ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೈಕ್ ಮತ್ತು ಸ್ಪೀಕರ್ ಹೊಂದಿರುವ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಬಸ್ ನಿಲ್ದಾಣಗಳಲ್ಲಿ ಅಳವಡಿಸಬೇಕಿದೆ.

ಮಕ್ಕಳ ಹಿತದೃಷ್ಟಿಯಿಂದ ಬೈಕ್ ಸವಾರಿಯ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ 4 ವರ್ಷದ ಒಳಗಿನ ಮಕ್ಕಳಿಗೆ ಶಿಶು ಕವಚ ಕಡ್ಡಾಯಗೊಳಿಸಿದೆ. ಇಲ್ಲವಾದರೆ ರೂ.1000 ದಂಡ ವಿಧಿಸಲಾಗುವುದು.  2019 ಏಪ್ರಿಲ್ 01 ರ ಹಿಂದೆ ನೋಂದಣೆಯಾಗಿರುವ ಎಲ್ಲಾ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನೋಂದಣಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನಿಗದಿ ಪಡಿಸಿದ್ದ ಕಾಲವಕಾಶವನ್ನು 2024 ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment