Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಅವಹೇಳನ : ದರ್ಶನ್, ಸುದೀಪ್ ಅಭಿಮಾನಿ ಹೆಸರಲ್ಲಿ ಪೋಸ್ಟ್

Facebook
Twitter
Telegram
WhatsApp

 

ಕಳೆದ ರಾತ್ರಿಯಿಂದ ಸೋಷಿಯಲ್ ಮೀಡಿಯಾದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ವಿಚಾರವೇ ಓಡಾಡುತ್ತಿದೆ. ಗಜಪಡೆ ಎಂಬ ಫೇಸ್ ಬುಕ್ ಪೇಜ್ ಒಂದರಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಅವಹೇಳನ ಮಾಡಲಾಗಿದೆ‌. ಬೆಳಗ್ಗೆಯಾಗುವುದರೊಳಗೆ ಆ ವಿಚಾರ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. ಪುನೀತ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮೊದಲು ತಪ್ಪಿತಸ್ಥರನ್ನು ಕಂಡು ಹಿಡಿದು ಶಿಕ್ಷೆ ನೀಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ದರ್ಶನ್ ಮತ್ತು ಸುದೀಪ್ ಹೆಸರಲ್ಲಿ ಈ ಒಂದು ಅವಹೇಳನಕಾರಿಯಾದಂತ ಪೋಸ್ಟರ್ ಹರಿದಾಡುತ್ತಿದೆ. ಮೊದಲಿಗೆ ಗಜಪಡೆ ಪೇಜ್ ನಲ್ಲಿ ಅಶ್ವಿನಿ ಅವರ ಬಗ್ಗೆ ಹಾಕಲಾಗಿತ್ತು. ಅದರಲ್ಲಿ ದರ್ಶನ್ ಅವರ ಫೋಟೋ ಇತ್ತು. ಇಂದೀಗ ಮಧ್ಯಾಹ್ನದ ವೇಳೆಗೆ ಸುದೀಪ್ ಅವರ ಅಭಿಮಾನಿ ಹೆಸರಲ್ಲಿ ಅಂತದ್ದೇ ಪೋಸ್ಟ್ ಹಾಕಿದ್ದಾರೆ. ಇದರ ವಿರುದ್ಧ ಅಭಿಮಾನಿಗಳು ಆಕ್ರೋಸಗೊಂಡಿದ್ದಾರೆ. ಇದು ಈಗಾಗಲೇ ಅಶ್ವಿನಿ ಅವರ ಗಮನಕ್ಕೂ ಬಂದಿದೆ, ದರ್ಶನ್ ಅವರ ಗಮನಕ್ಕೂ ಬಂದಿದೆ, ಸುದೀಪ್ ಅವರ ಅಭಿಮಾನಿಗಳ ಗಮನಕ್ಕೂ ಬಂದಿದೆ. ದರ್ಶನ್ ಬೇಸರ ವ್ಯಕ್ತಪಡಿಸಿದ್ದು, ಸುದೀಪ್ ಅಭಿಮಾನಿಗಳು ಇವೆಲ್ಲ ನಮ್ಮತ್ರ ಬೇಡ ಎಂದೇ ಎಚ್ಚರಿಕೆ ನೀಡಿದ್ದಾರೆ.

ಆರ್ಸಿಬಿ ಹೆಸರನ್ನು ಬದಲಾಯಿಸಲು ಅನ್ ಬಾಕ್ಸ್ ಇವೆಂಟ್ ಇಟ್ಟುಕೊಳ್ಳಲಾಗಿತ್ತು. ಮ್ಯಾಚ್ ಆರಂಭಕ್ಕೂ ಮುನ್ನ ಅನ್ ಬಾಕ್ಸ್ ಇವೆಂಟ್ ಜೊತೆಗೆ ಹೊಸ ಜರ್ಸಿಯನ್ನು ಬಿಡುಗಡೆ ಮಾಡಲಾಯಿತು. ಆರ್ಸಿಬಿ ತಂಡದ ಜೆರ್ಸಿ ಬಿಡುಗಡೆ ಮಾಡಿ, ಶುಭಹಾರೈಸಿದ್ದರು ಅಶ್ವಿನಿ ಪುನೀತ್ ರಾಜ್‍ಕುಮಾರ್. ಆದರೆ ಆರ್ಸಿಬಿ ಗೆಲುವು ಕಾಣದೆ ಇರುವ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಗಜಪಡೆ ಎಂಬ ಪೇಜ್ ನಲ್ಲಿ ಅಶ್ವಿನಿ ಅವರ ಬಗ್ಗರ ಕೆಟ್ಟದಾಗಿ ಪೋಸ್ಟ್ ಹಾಕಾಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!