ಅಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ : ಸೆಪ್ಟೆಂಬರ್ 24 ರಂದು ಸಾಣೆಹಳ್ಳಿಯಲ್ಲಿ ಪೂರ್ವಭಾವಿ ಸಭೆ

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.19 :
ಅಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜನೆಯ ಬಗ್ಗೆ ಸಭೆ ಸಾಹಿತ್ಯ,ಕಲೆ,ಸಂಸ್ಕøತಿಗಳಲ್ಲಿ ಪರಸ್ಪರ ಹತ್ತಿರವಿರುವ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳ ಜಂಟಿಯಾಗಿ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಉದ್ದೇಶಿಸಲಾಗಿದೆ.

ಇದಕ್ಕೆ ಪೂರಕವಾಗಿ ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಲ್ಲಿ  ದಿನಾಂಕ 24.09.2023 ರ ಭಾನುವಾರ ಬೆಳಗ್ಗೆ 11 ಕ್ಕೆ ಹೊಸದುರ್ಗ ತಾಲ್ಲೂಕು ಸಾಣೆಹಳ್ಳಿ ಶ್ರೀಮಠದ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ.

ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಸಭೆ ಜರುಗಲಿದೆ. ಕಸಾಪ ಗೌರವ ಸಲಹೆಗಾರರಾದ ಎ.ಸಿ.ಚಂದ್ರಪ್ಪ, ಚಿತ್ರದುರ್ಗ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್,ಹೊಸದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಪಿ.ಓಂಕಾರಪ್ಪ, ಹೊಳಲ್ಕೆರೆ ಕಸಾಪ ಅಧ್ಯಕ್ಷ ಎನ್. ಶಿವಮೂರ್ತಿ ಸೇರಿದಂತೆ ಕಸಾಪದ ಪದಾಧಿಕಾರಿಗಳು ಮತ್ತಿತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಮ್ಮೇಳನ ದಿನಾಂಕ, ಸ್ಥಳ ಸೇರಿದಂತೆ ಪ್ರಮುಖ ವಿಷಯಗಳನ್ನು ಕುರಿತು ಚರ್ಚಿಸಲಾಗುವುದು ಎಂದು ಚಿತ್ರದುರ್ಗ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *