Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‌. ಆರ್‌. ಎಸ್. ಕಾಲೇಜಿನಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ | ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಈ ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ : ಡಾ. ಶ್ರೀ ಬಸವ ಕುಮಾರ ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ. 27 :  ಇಂದಿನ ದಿನಮಾನಗಳಲ್ಲಿ ಬೇರೆ ಬೇರೆ ರೀತಿಯ ಸಡಗರ ಸಂಭ್ರಮದ ಕಾರ್ಯಕ್ರಮಗಳನ್ನು ನೋಡಿದ್ದೇನೆ.  ಆದರೆ ಇಂತಹ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ನೋಡಿದ್ದು ಅಪರೂಪ. ಹಾಗಾಗಿ ಈ ಸಂಸ್ಥೆಯ ಆಡಳಿತ ಮಂಡಳಿಯವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ವಿದ್ಯಾರ್ಥಿಗಳೇ ಸಮಯ ಅಮೂಲ್ಯವಾದದ್ದು ಇದರ ಬಗ್ಗೆ ಎಚ್ಚರವಿರಲಿ ಎಂದು ಹೇಳಿದರು. ಇಂದಿನ ವಿಜ್ಞಾನ ಯುಗದಲ್ಲಿ ತಾವೆಲ್ಲರೂ ಉತ್ತಮ ಸಾಧನೆಯನ್ನು ಮಾಡಿ ಈ ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಈ ನೆಲದ ಸಂಪತ್ತಾಗಿ ನಿರ್ಮಾಣವಾಗಬೇಕು ಎಂದು ಎಸ್‌.ಜೆ.ಎಂ‌. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ರೀ ಬಸವ ಕುಮಾರ ಸ್ವಾಮೀಜಿ ಹೇಳಿದರು.

ಅವರು ನಗರದ ಹೊರವಲಯದ ಎಸ್‌. ಆರ್‌. ಎಸ್. ಪಿಯು ಕಾಲೇಜಿನ ಶ್ರೀ ಅನಂತಕೃಷ್ಣ ವೇದಿಕೆಯಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ   “ಸಾಧಕರೊಂದಿಗೆ ಸಂವಾದ”2024ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಧರ್ಮೇಂದ್ರ ಕುಮಾರ್‌ ಮೀನಾ ಅವರು ಮಾತನಾಡಿ  ವಿಜ್ಞಾನ ವಿಭಾಗದಲ್ಲಿ ಸಾಕಷ್ಟು ವೈದ್ಯಕೀಯ, ಐಐಟಿ, ಎನ್‌ಐಟಿಗಳಲ್ಲಿ ಅವಕಾಶಗಳಿವೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆಯನ್ನು ಮಾಡಿ ತಂದೆ-ತಾಯಿಗಳ ಕನಸನ್ನು ಈಡೇರಿಸಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸತೀಶ್‌ ನಾಯ್ಕ್‌ ಎಸ್‌ ಜಿ, ಪದವಿಪೂರ್ವ ಶಿಕ್ಷಣ ಎನ್ನುವುದು ಎರಡಕ್ಷಗಳ ಅಧ್ಯಯನ ಎನ್ನುವುದಕ್ಕಿಂತ  ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನನ್ನ ಪರಿಶ್ರಮ ಹೇಗಿದೆ ಎಂಬುದನ್ನು ಪ್ರತಿನಿತ್ಯ ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ಸಾಧಿಸಬೇಕು ಎಂದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿಯವರು, ಪ್ರತಿವರ್ಷ ಸಾಧಕರೊಂದಿಗೆ ಸಂವಾದ ಕಾರ‍್ಯಕ್ರಮವನ್ನು ಆಯೋಜಿಸುವ ಉದ್ದೇಶ ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲೆಂಬ ಮಹದಾಸೆ. ನಿಮ್ಮ ಜೀವನದಲ್ಲಿ ಪಿಯುಸಿ ತುಂಬಾ ಮಹತ್ವದ ಘಟ್ಟ.  ಹಾಗಾಗಿ ಎಚ್ಚರಿಕೆ, ಶ್ರದ್ಧೆ ಹಾಗೂ ನಿರಂತರವಾದ ಅಧ್ಯಯನ ಬಹಳ ಮುಖ್ಯ.  ಈ ಸ್ಪರ್ಧಾತ್ಮಕ ಜಗತ್ತನ್ನು ಅರಿತಿರುವ ನಾನು ಮುಂದಿನ ದಿನಗಳಲ್ಲಿ ಕೆಎಎಸ್‌, ಐಎಎಸ್‌, ಐಪಿಎಸ್‌ ಆಕಾಂಕ್ಷಿಗಳಿದ್ದರೆ ಅವರಿಗೆ ಅಧ್ಯಯನಕ್ಕೆ ಪೂರಕವಾದ ವಾತರವಣವನ್ನು ಕಲ್ಪಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ 2024ನೇ ಸಾಲಿನ ನೀಟ್‌, ಜೆಇಇ ಹಾಗೂ ಬರ‍್ಡ್‌ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ  ಕು.ಎನ್‌ ಮದನ್‌,  ಕು.ಪ್ರಣತಿ ಹೆಚ್‌ ವೈ,, ಕು. ಸಂಜಯ್‌ ಜಿ, ಕು.ಸೃಜನ್‌ ಪಿ ಟಿ, ಕು.ನೇಹಾ ಎಸ್‌ ಕು.ಗೀತಾ ಟಿ, ಹಾಗೂ ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳಿಸಿದ ಒಟ್ಟು 68 ವಿದ್ಯರ‍್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಬಿ. ಎಲ್‌. ಅಮೋಘ್‌, ಆಡಿಳಿತಾಧಿಕಾರಿಗಳಾದ ಡಾ.ರವಿ ಟಿ ಎಸ್‌, ಉಪನ್ಯಾಸಕರು, ಬೊಧಕೇತರ ಸಿಬ್ಬಂದಿ ಹಾಗೂ ವಿದ್ಯರ‍್ಥಿಗಳು ಹಾಜರಿದ್ದರು.  ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!