ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 06 : ಒಳ ಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಗಣತಿ ಕಾರ್ಯ ಆರಂಭಿಸಿದ್ದು, ಆದಿ ದ್ರಾವಿಡ, ಆದಿ ಕರ್ನಾಟಕ ಹಾಗೂ ಇತರೆ ಉಪ ಜಾತಿಯ ಛಲವಾದಿ ಬಂಧುಗಳು ಕಡ್ಡಾಯವಾಗಿ ಛಲವಾದಿ-ಹೊಲೆಯ ಎಂದು ಬರೆಸುವಂತೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಸಮಿತಿ
ನಿರ್ದೇಶಕ ಶಿವಪ್ರಸಾದ್ ಎಸ್. ವಿನಂತಿಸಿದ್ದಾರೆ.

ಜಸ್ಟಿಸ್ ನಾಗಮೋಹನ್ದಾಸ್ರವರ ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗನುಗುಣವಾಗಿ ಹಂಚಿಕೆ ಮಾಡಲು ಜಾತಿ ಗಣತಿಯನ್ನು ಆರಂಭಿಸಿದೆ. ಮನೆ ಮನೆಗೆ ಗಣತಿಗೆ ಬರುವವರಿಗೆ ನಿಖರವಾದ ಮಾಹಿತಿಯನ್ನು ನೀಡಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಿವಪ್ರಸಾದ್ ಎಸ್. ಛಲವಾದಿಗಳಲ್ಲಿ ಮನವಿ ಮಾಡಿದ್ದಾರೆ.


















