Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಳ ಮೀಸಲಾತಿ : ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ : ಎಎಪಿ ಜಗದೀಶ್

Facebook
Twitter
Telegram
WhatsApp

ಸುದ್ದಿಒನ್, ಸೆಪ್ಟೆಂಬರ್. 04 : 30 ವರ್ಷಗಳ ಕಾಲ ನಿರಂತರ ಹೋರಾಟದಿಂದ ಒಳ ಮೀಸಲಾತಿ ಜಾರಿ ಕುರಿತು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ ಅಂದಿನಿಂದ ಇಂದಿನವರೆಗೂ ಕೂಡ ರಾಜ್ಯ ಸರ್ಕಾರ ಅನುಮೋದನೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಕಡು ಬಡತನದಲ್ಲಿ ಜನಿಸಿದ ಅದೆಷ್ಟೋ ಜನಾಂಗದವರು ಇಂದಿಗೂ ಕೂಡ ಬಡತನ ರೇಖೆಗಿಂತ ಕೆಳ ವರ್ಗದಲ್ಲೇ ಇದ್ದಾರೆ. ಇಂಥವರಿಗೆ ಒಳ ಮೀಸಲಾತಿ ಜಾರಿ ಆಗುವುದರಿಂದ ಅವರ ಆರ್ಥಿಕ ಅಭಿವೃದ್ಧಿಯು ಸಹ ವೃದ್ಧಿಸಲಿದೆ. ಅಷ್ಟೇ ಅಲ್ಲದೆ ಒಳ ಮೀಸಲಾತಿ ಜಾರಿ ಆಗುವುದರಿಂದ ಅದೆಷ್ಟು ಕುಟುಂಬಗಳು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತವೆ ಎಂದರು.

ಬಹುತೇಕ ರಾಜಕಾರಣಿಗಳು ಮೀಸಲಾತಿಯ ಅವಕಾಶವನ್ನು ಪಡೆದುಕೊಂಡು ಸಾಕಷ್ಟು ಅಭಿವೃದ್ಧಿ ಹೊಂದಿದ್ದಾರೆ. ಅಂತಹ ರಾಜಕಾರಣಿ ವ್ಯಕ್ತಿಗಳೇ ಇಂದು ಒಳ ಮೀಸಲಾತಿಯ ಕೆನ ಪದರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮುದಾಯಕ್ಕೆ ಮಾಡಿದ ಮೋಸವೆಂದರೆ ತಪ್ಪಾಗಲಾರದು.

ಮಾದಿಗ ಸಮುದಾಯದವರು ನಿರಂತರ ಹೋರಾಟದಿಂದ ಒಳ ಮೀಸಲಾತಿಗೆ ಧ್ವನಿಯೆತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪುನಿಂದ ಅವರ ಬದುಕು ಬದಲಾಗುತ್ತದೆ ಎನ್ನುವ ಕಲ್ಪನ ಎಲ್ಲರ ಮನೆ ಮಾತಾಗಿತ್ತು.  ಆದರೆ ಸರ್ಕಾರ ಮಾತ್ರ ಅದಕ್ಕೆ ಅನುಮೋದನೆ ನೀಡಲು ಹಿಂದೇಟು ಹಾಕುತ್ತಿದೆ.

ಒಳ ಮೀಸಲಾತಿ ಅಂಗೀಕಾರ ಮಾಡುವ ಕುರಿತಾಗಿ ಈಗಲೂ ಸಹ ನಿರಂತರ ದಲಿತ ಸಮುದಾಯಗಳ ಹೋರಾಟ ಮಾಡುತ್ತಲೇ ಇದ್ದಾರೆ. ಸಂಬಂಧಪಟ್ಟ ಸ್ವಾಮೀಜಿಗಳು ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನು ಸಲ್ಲಿಸುತ್ತಲೇ ಇದ್ದಾರೆ ಆದರೂ ಸಹ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಂತಿದೆ. ಒಳ ಮೀಸಲಾತಿಯನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕೆನ್ನುವ ಸಮುದಾಯಗಳು ಮತ್ತೆ ಸಂಕಷ್ಟಕ್ಕೆ ಸಿಗುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!