Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ : ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲ : ಎಎಪಿ ಜಗದೀಶ್

---Advertisement---

ಸುದ್ದಿಒನ್, ಸೆಪ್ಟೆಂಬರ್. 04 : 30 ವರ್ಷಗಳ ಕಾಲ ನಿರಂತರ ಹೋರಾಟದಿಂದ ಒಳ ಮೀಸಲಾತಿ ಜಾರಿ ಕುರಿತು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ ಅಂದಿನಿಂದ ಇಂದಿನವರೆಗೂ ಕೂಡ ರಾಜ್ಯ ಸರ್ಕಾರ ಅನುಮೋದನೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಕಡು ಬಡತನದಲ್ಲಿ ಜನಿಸಿದ ಅದೆಷ್ಟೋ ಜನಾಂಗದವರು ಇಂದಿಗೂ ಕೂಡ ಬಡತನ ರೇಖೆಗಿಂತ ಕೆಳ ವರ್ಗದಲ್ಲೇ ಇದ್ದಾರೆ. ಇಂಥವರಿಗೆ ಒಳ ಮೀಸಲಾತಿ ಜಾರಿ ಆಗುವುದರಿಂದ ಅವರ ಆರ್ಥಿಕ ಅಭಿವೃದ್ಧಿಯು ಸಹ ವೃದ್ಧಿಸಲಿದೆ. ಅಷ್ಟೇ ಅಲ್ಲದೆ ಒಳ ಮೀಸಲಾತಿ ಜಾರಿ ಆಗುವುದರಿಂದ ಅದೆಷ್ಟು ಕುಟುಂಬಗಳು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತವೆ ಎಂದರು.

ಬಹುತೇಕ ರಾಜಕಾರಣಿಗಳು ಮೀಸಲಾತಿಯ ಅವಕಾಶವನ್ನು ಪಡೆದುಕೊಂಡು ಸಾಕಷ್ಟು ಅಭಿವೃದ್ಧಿ ಹೊಂದಿದ್ದಾರೆ. ಅಂತಹ ರಾಜಕಾರಣಿ ವ್ಯಕ್ತಿಗಳೇ ಇಂದು ಒಳ ಮೀಸಲಾತಿಯ ಕೆನ ಪದರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮುದಾಯಕ್ಕೆ ಮಾಡಿದ ಮೋಸವೆಂದರೆ ತಪ್ಪಾಗಲಾರದು.

ಮಾದಿಗ ಸಮುದಾಯದವರು ನಿರಂತರ ಹೋರಾಟದಿಂದ ಒಳ ಮೀಸಲಾತಿಗೆ ಧ್ವನಿಯೆತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪುನಿಂದ ಅವರ ಬದುಕು ಬದಲಾಗುತ್ತದೆ ಎನ್ನುವ ಕಲ್ಪನ ಎಲ್ಲರ ಮನೆ ಮಾತಾಗಿತ್ತು.  ಆದರೆ ಸರ್ಕಾರ ಮಾತ್ರ ಅದಕ್ಕೆ ಅನುಮೋದನೆ ನೀಡಲು ಹಿಂದೇಟು ಹಾಕುತ್ತಿದೆ.

ಒಳ ಮೀಸಲಾತಿ ಅಂಗೀಕಾರ ಮಾಡುವ ಕುರಿತಾಗಿ ಈಗಲೂ ಸಹ ನಿರಂತರ ದಲಿತ ಸಮುದಾಯಗಳ ಹೋರಾಟ ಮಾಡುತ್ತಲೇ ಇದ್ದಾರೆ. ಸಂಬಂಧಪಟ್ಟ ಸ್ವಾಮೀಜಿಗಳು ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನು ಸಲ್ಲಿಸುತ್ತಲೇ ಇದ್ದಾರೆ ಆದರೂ ಸಹ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಂತಿದೆ. ಒಳ ಮೀಸಲಾತಿಯನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕೆನ್ನುವ ಸಮುದಾಯಗಳು ಮತ್ತೆ ಸಂಕಷ್ಟಕ್ಕೆ ಸಿಗುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment