Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತ ಸಮುದಾಯಗಳ ಒಳ ಮೀಸಲಾತಿ ಅಪ್ಡೇಟ್; ಸುದ್ದಿಗೋಷ್ಟಿಯಲ್ಲಿ ಹೆಚ್.ಸಿ.ಮಹದೇವಪ್ಪ ಹೇಳಿದ್ದೇನು..?

---Advertisement---

ಬೆಂಗಳೂರು; ದಲಿತ ಸಮುದಾಯಗಳ ಒಳಮೀಸಲಾತಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೀಗ ದಲಿತ ಸಮುದಾಯದ ಒಳಮೀಸಲಾತಿ ಬಗ್ಗೆ ಬಿಗ್ ಅಪ್ಡೇಟ್ ನೀಡಲಾಗಿದೆ. ಸಚಿವ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್ ಸುದ್ದಿಗೋಷ್ಟಿ ನಡೆಸಿ ಈ ಸಂಬಂಧ ಮಾಹಿತಿ ನೀಡಿದ್ದಾರೆ.

ಈಗಾಗಲೇ ಈ ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯೂ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಈ ಬೆನ್ನಲ್ಲೇ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ. ಈ ಸಂಬಂಧ ಹೆಚ್.ಕೆ.ಪಾಟೀಲ್ ಮಾತನಾಡಿ, ಇಂದಿನ ಸಭೆಯಲ್ಲಿ 36 ವಿಷಯಗಳ ಪರಿಶೀಲನೆ ಮಾಡಿ, 34 ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಲಾಗಿತ್ತು. ಒಳ ಮೀಸಲಾತಿ ಬಗ್ಗೆ ಮಧ್ಯಂತರ ಶಿಫಾರಸು ಮಾಡಲಾಗಿತ್ತು. ಆ ಸಮಿತಿಯೂ ನಾಲ್ಕು ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.

ಹೊಸ ಸಮೀಕ್ಷೆಯ ದತ್ತಾಂಶದ ಆಧಾರದ ಮೇಲೆ ಎಸ್ಸಿ ಉಪಜಾತಿ ವರ್ಗೀಕರಣ ಮಾಡಿ ಮೀಸಲಾತಿ ಹಂಚಿಕೆ ಮಾಡಬೇಕು. ನಾಗಮೋಹನ್ ದಾಸ್ ಸಮಿತಿಯನ್ನೇ ಮುಂದುವರೆಸಲು ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಲಾಗಿದೆ. ಸಮಿತಿ ಸದಸ್ಯರು ಕೂಡ 60‌ ದಿನಗಳ ಒಳಗೆ ಸಮೀಕ್ಷೆ ಮಾಡ್ತೇವೆ ಎಂದು ತಿಳಿಸಿದ್ದಾರೆ. ಅದಕ್ಕೆ ಸರ್ಕಾರ ಕೂಡ ಅನುಮತಿ ನೀಡಿದೆ. ಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂದ್ರ ಅಂತ ಇದೆ. ಆದರೆ ಇದರಲ್ಲಿ ಇರುವ ಗೊಂದಲ ಬಗೆಹರಿಸುವ ಉದ್ದೇಶ ಇದೆ. ಇದನ್ನು ಸರಿಪಡಿಸಿಕೊಳ್ಳಲು ಹೆಚ್ಚು ಸಮಯ ಬೇಕಿಲ್ಲ. 60 ದಿನದೊಳಗೆ ನೀಡಬಹುದು ಎಂದು ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...