ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಸೀರೆ ವಾಕಥಾನ್‍ನಲ್ಲಿ ಬಣ್ಣಬಣ್ಣದ ಸೀರೆಗಳನ್ನುಟ್ಟು ಹೆಜ್ಜೆ ಹಾಕಿದ ಮಹಿಳೆಯರು

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಭಾನವಾರ ನಗರದಲ್ಲಿ ನಡೆದ ಸೀರೆ ವಾಕಥಾನ್‍ನಲ್ಲಿ ನೂರಾರು ಮಹಿಳೆಯರು ವಿಭಿನ್ನ ರೀತಿಯಲ್ಲಿ ಸೀರೆಗಳನ್ನುಟ್ಟು ಸಂಭ್ರಮಿಸಿದರು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಸೀರೆವಾಕಥಾನ್‍ಗೆ ವಾಸವಿ ಕ್ಲಬ್ ಇಂಟರ್‍ನ್ಯಾಷನಲ್ ಗೌರ್ವನರ್ ಅಶೋಕ್ ಚಾಲನೆ ನೀಡಿದರು.

ಉಡುಪಿಯಿಂದ ಆಗಮಿಸಿದ್ದ ಮಹಿಳೆಯರ ಚಂಡೆ ಮೃದಂಗ ಸೀರೆವಾಕಥಾನ್‍ಗೆ ಮೆರಗು ತುಂಬಿತು. ಸೀರೆವಾಕಥಾನ್‍ನಲ್ಲಿ ಭಾರತ್‍ಮಾತ ಕೀ ಜೈ ಘೋಷಣೆಗಳು ಮೊಳಗಿದವು.
ಹಸಿರು, ನೀಲಿ, ಕೇಸರಿ, ಕಂದು ವರ್ಣದ ಸೀರೆಗಳನ್ನುಟ್ಟ ಮಹಿಳೆಯರು ಸೀರೆವಾಕಥಾನ್‍ನಲ್ಲಿ ಹೆಜ್ಜೆ ಹಾಕಿದರು.

ಬಿಸಿಲ ಝಳಕ್ಕೆ ಮಹಿಳೆಯರು ತಲೆಗೆ ಟೋಪಿ ಹಾಗೂ ಕಣ್ಣಿಗೆ ಕೂಲಿಂಗ್ ಗ್ಲಾಸ್‍ಗಳನ್ನು ಧರಿಸಿದ್ದರು. ಒನಕೆ ಓಬವ್ವ ಪ್ರತಿಮೆ ಬಳಿ ಸೀರೆ ವಾಕಥಾನ್ ಮುಕ್ತಾಯಗೊಂಡಿತು. ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷೆ ರಾಜೇಶ್ವರಿ ಇನ್ನು ಮುಂತಾದವರು ಸೀರೆವಾಕಥಾನ್‍ನಲ್ಲಿ ಪಾಲ್ಗೊಂಡಿದ್ದರು.

 

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

15 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago