Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಚಂದ್ರವಳ್ಳಿಯಲ್ಲಿ ಸಾಮೂಹಿಕ ಯೋಗ

Facebook
Twitter
Telegram
WhatsApp

ಚಿತ್ರದುರ್ಗ,(ಜೂ.21): ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಿತ್ರದುರ್ಗ ನಗರದ ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಚಂದ್ರವಳ್ಳಿಯಲ್ಲಿ ಸಾಮೂಹಿಕ ಯೋಗ ಮಾಡುವುದರ ಮೂಲಕ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಮಾನವೀಯತೆಗಾಗಿ ಯೋಗ ಎಂಬ ಘೋಷವಾಕ್ಯದಡಿ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯು ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಚಂದ್ರವಳ್ಳಿಯಲ್ಲಿ ಎರಡು ಕಡೆ ಸಾಮೂಹಿಕ ಯೋಗ ಆಚರಿಸಲಾಯಿತು.

ಯೋಗ ದಿನಾಚರಣೆ ಅಂಗವಾಗಿ ಮುಂಜಾನೆ 5 ಗಂಟೆಯಿಂದಲೇ ಕೋಟೆ ಹಾಗೂ ಚಂದ್ರವಳ್ಳಿಯತ್ತ ಯೋಗಾಭ್ಯಾಸಿಗಳು ನಡೆದುಬಂದರು. ವಿದ್ಯಾರ್ಥಿಗಳು, ಯುವ ಜನರು, ಮಹಿಳೆಯರು, ವೃದ್ಧರು ಸೇರಿದಂತೆ ವಿವಿಧ ವಯೋಮಾನದವರು ಯೋಗಾಭ್ಯಾಸದಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡರು. ಚಳಿಯ ವಾತಾವರಣ, ತಂಗಾಳಿ, ಹಕ್ಕಿಯ ಚಿಲಿಪಿಲಿಯ ವಾತಾವರಣದ ನಡುವೆ ಕಲ್ಲಿನ ಕೋಟೆ ಹಾಗೂ ಚಂದ್ರವಳ್ಳಿಯ ವಿಶಾಲ ಆವರಣದಲ್ಲಿ ಯೋಗಾಭ್ಯಾಸ ನಡೆಸಿದರು.

ಕೋಟೆ ಆವರಣದಲ್ಲಿ ಮಾರ್ಧನಿಸಿದ ಯೋಗ:

ಐತಿಹಾಸಿಕ ಕಲ್ಲಿನಕೋಟೆ ಆವರಣದಲ್ಲಿ ಯೋಗ ಶಿಕ್ಷಕ ಕೆಂಚವೀರಪ್ಪ ಅವರು ಆಯುಷ್ ಇಲಾಖೆ ಹೊರಡಿಸಿದ ಯೋಗ ಶಿಷ್ಟಾಚಾರದ ಅನುಸಾರ ಯೋಗ ತರಬೇತಿ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಮಾನವೀಯತೆಗಾಗಿ ಯೋಗ ಎಂಬುದು ಈ ಬಾರಿ ಯೋಗ ದಿನಾಚರಣೆ ಘೋಷ್ಯವಾಕ್ಯವಾಗಿದ್ದು, ಪ್ರತಿಯೊಬ್ಬರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಚಂದ್ರವಳ್ಳಿಯಲ್ಲಿ ಸಾಮೂಹಿಕ ಯೋಗ:

ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಚಂದ್ರವಳ್ಳಿಯಲ್ಲಿ 500ಕ್ಕೂ ಹೆಚ್ಚು ಜನರಿಂದ ಯೋಗಾಭ್ಯಾಸ ನಡೆಯಿತು. ಯೋಗ ತರಬೇತುದಾರ ರವಿ ಅಂಬೇಕರ್ ಯೋಗ ತರಬೇತಿ ನೀಡಿದರು.

ಜಿಲ್ಲಾ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ.ಸುರೇಶ್ ಮಾತನಾಡಿ, 2014ರಲ್ಲಿ ವಿಶ್ವಸಂಸ್ಥೆಯು 175 ರಾಷ್ಟ್ರಗಳನ್ನೊಳಗೊಂಡಂತೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುವಂತೆ ಅನುಷ್ಠಾನಗೊಳಿಸಲಾಗಿದೆ. ಅದರಂತೆ ಪ್ರತಿ ವರ್ಷವೂ ಕೂಡ ವಿಶೇಷ ಘೋಷ ವಾಕ್ಯಗಳೊಂದಿಗೆ ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಮಾಡುವುದರಿಂದ ಆರೋಗ್ಯ ಹೆಚ್ಚು ಸಮೃದ್ಧಿಸುತ್ತದೆ. ಯೋಗವು ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವಂತಹ ಕಲೆಯಾಗಿದೆ. ಯೋಗ ಮಾಡುವುದರಿಂದ ಆರೋಗ್ಯದಲ್ಲಿ ಹಿಡಿತವಿದ್ದು, ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.

ಬೆಸ್ಕಾಂ ಇನ್ಸ್‍ಪೆಕ್ಟರ್ ಲಕ್ಷ್ಮಿನಾರಾಯಣ ಮಾತನಾಡಿ, 8ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ. ದಿನನಿತ್ಯದ ಸಮಯದಲ್ಲಿ ಕೆಲಸದ ಜಂಜಾಟದಲ್ಲಿ ಯೋಗ ಮರೆತು ಆರೋಗ್ಯದಲ್ಲಿ ಹಿಡಿತವಿಲ್ಲದಂತಾಗಿದೆ. ಪ್ರತಿಯೊಬ್ಬರು ಯೋಗ ಮಾಡುವುದರಿಂದ ಮನಃ ಶಾಂತಿ ಜೊತೆಗೆ ಆರೋಗ್ಯ ವೃದ್ಧಿಸುತ್ತದೆ ಎಂದು ತಿಳಿಸಿದರು.

ಯೋಗ ತರಬೇತಿದಾರ ರವಿ ಕೆ ಅಂಬೇಕರ್ ಮಾತನಾಡಿ, ಮನಸ್ಸು ಶಾಂತವಾಗಿರಲು ಯೋಗದ ಕಡೆ ಹೆಚ್ಚು ಗಮನ ಹರಿಸಬೇಕು. ಕಾಯಿಲೆಗಳು ಬರುವುದಕ್ಕಿಂತ ಮುಂಚೆ ಯೋಗದಲ್ಲಿ ತೊಡಗಿಕೊಳ್ಳಬೇಕು. ಕಾಯಿಲೆ ಬಂದ ಮೇಲೆ ಯೋಗ ಮಾಡುವುದು ವ್ಯರ್ಥ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯು.ಗಿರೀಶ್, ಪುರಾತತ್ವ ಇಲಾಖೆ ಅಧಿಕಾರಿ ಸುಧೀರ್, ರಾಜ್ಯ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಪ್ರದೀಪ್, ಪತಾಂಜಲಿ ಯೋಗ ಸಂಸ್ಥೆಯ ಸುಜಾತ, ರಾಮಲಿಂಗಪ್ಪ, ಚಿತ್ರದುರ್ಗ ಯೋಗ ಸಂಸ್ಥೆ ಅಧ್ಯಕ್ಷ ಮಹಡಿ ಶಿವಮೂರ್ತಿ, ಮಹಿಳಾ ಸಮಾಜದ ಅಧ್ಯಕ್ಷೆ ಮೋಕ್ಷ ರುದ್ರಸ್ವಾಮಿ, ಆಯುಷ್ ವೈದ್ಯಾಧಿಕಾರಿಗಳಾದ ಡಾ. ಪ್ರಶಾಂತ್ ಕುಮಾರ್, ಡಾ.ಉಮೇಶ್ ರೆಡ್ಡಿ, ಡಾ.ಸಂಜೀವ್ ರೆಡ್ಡಿ, ಡಾ.ರಾಜಶೇಖರಯ್ಯ, ಡಾ.ಅನಿಲ್‍ಕುಮಾರ್, ಡಾ.ರಹೀಮಾನ್, ಪ್ರಜಾಪಿತ ಈಶ್ವರಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಕುಮಾರಿ ರಶ್ಮಿ, ದಿವ್ಯ, ಅಮೃತ ಆಯುರ್ವೇದಿಕ್ ಕಾಲೇಜ್ ಪ್ರಾಂಶುಪಾಲ ಡಾ.ಪ್ರಶಾಂತ್, ಆಯುರ್ವೇಧ ಕಾಲೇಜಿನ ವಿದ್ಯಾರ್ಥಿಗಳು, ಸ್ಕೌಟ್ಸ್ ಅಂಡ್ ಗೈಡ್ಸ್, ಜ್ಞಾನ ಭಾರತಿ ಶಾಲಾ ವಿದ್ಯಾರ್ಥಿಗಳು, ಬೆಸ್ಕಾಂ ಜಾಗೃತಿ ದಳದ ಸಿಬ್ಬಂದಿ ವರ್ಗ ಹಾಗೂ ಆಶಾ ಕಾರ್ಯಕರ್ತರು ಹಾಗೂ ಯೋಗಾಸಕ್ತರು ಉಪಸ್ಥಿತರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

ಮೊಬೈಲ್ ನಲ್ಲಿ Cashexpand-U ಅಪ್ಲಿಕೇಷನ್ ಇದ್ದರೆ ಕೂಡಲೇ ಡಿಲೀಟ್ ಮಾಡಿ : ಸರ್ಕಾರದಿಂದ ಎಚ್ಚರಿಕೆಯ ಸಂದೇಶ..!

ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಸಿಕ್ಕಾಪಟ್ಟೆ ಜಾಸ್ತಿಯಾಗ್ತಾ ಇದೆ. ಒಂದು ಸೆಕೆಂಡ್ ಯಾಮಾರಿದರು ಅಕೌಂಟ್ ನಲ್ಲಿ ಇರುವ ಹಣ ಪಕ್ಕನೇ ಮಾಯವಾಗಿ ಬಿಡುತ್ತದೆ. ಸೈಬರ್ ಕ್ರೈಂಗೆ ದೂರು ನೀಡಿದರು ಆ ಹಣ ಮರಳಿ

Dengue fever : ಡೆಂಗ್ಯೂ ಜ್ವರ ಇದ್ದರೆ, ನೀವು ಯಾವ ಹಣ್ಣುಗಳನ್ನು ತಿನ್ನಬೇಕು ? ಎಳ ನೀರು ಒಳ್ಳೆಯದೇ ?

  ಸುದ್ದಿಒನ್ : ಮಳೆಗಾಲ ರೋಗಗಳ ಕಾಲ. ಮಳೆಗಾಲದಲ್ಲಿ ಡೆಂಗ್ಯೂ ಭೀತಿ ಹೆಚ್ಚು. ಮಳೆಗಾಲದಲ್ಲಿ ಹಲವೆಡೆ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಈ ಸೊಳ್ಳೆಗಳು ಮಲೇರಿಯಾ, ಚಿಕೂನ್‌ಗುನ್ಯಾ, ಡೆಂಗ್ಯೂ ಮುಂತಾದ ಅಪಾಯಕಾರಿ ರೋಗಗಳನ್ನು

error: Content is protected !!