Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂಟೂರು ವಾಸುದೇವರೆಡ್ಡಿ ನಿಧನ

---Advertisement---

 

 

ಚಿತ್ರದುರ್ಗ, (ಏ.19): ಹಿರಿಯ ಬಿಜೆಪಿ ಕಾರ್ಯಕರ್ತ ತುರುವನೂರಿನ ಇಂಟೂರು ವಾಸುದೇವರೆಡ್ಡಿ(85) ಬುಧವಾರ ಸಂಜೆ ನಿಧನರಾಗಿದ್ದಾರೆ.

ನಿವೃತ್ತ ಶಿಕ್ಷಕರೂ ಆಗಿರುವ ಮೃತರು ಪತ್ನಿ, ಚಳ್ಳಕೆರೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಶಿಧರ್ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಜನಸಂಘದ ಕಾಲದಿಂದಲೂ ಸಂಘ ಪರಿವಾರದ ನಂಟು ಹೊಂದಿದ್ದ ವಾಸುದೇವರೆಡ್ಡಿ ಅವರನ್ನು ಇತ್ತೀಚೆಗೆ ಮುರುಘಾ ಮಠದಲ್ಲಿ ನಡೆದ ಬಿಜೆಪಿ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದ್ದರು.

ಆರೆಸ್ಸೆಸ್ಸ್ನ ತೃತೀಯ ವರ್ಷದ ಶಿಕ್ಷಣ ಪಡೆದಿದ್ದ ಅವರು, 1975ರ ತುರ್ತು ಪರಿಸ್ಥಿತಿಯಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಜನಸಂಘ, ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
1972 ರಲ್ಲಿ ಚಿತ್ರದುರ್ಗದ ಜ್ಞಾನಭಾರತಿ ವಿದ್ಯಾಮಂದಿರದ ಸಂಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಇಂಟೂರು ವಾಸುದೇವರೆಡ್ಡಿ, 1983 ರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.

ಇತ್ತೀಚಿನವರೆಗೂ ತುರುವನೂರು ಬಿಜೆಪಿ ಘಟಕದ ಅಧ್ಯಕ್ಷರೂ, ರಾಜ್ಯ ರೈತ ಮೋರ್ಚಾ ಸದಸ್ಯರೂ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇಂಟೂರು ವಾಸುದೇವರೆಡ್ಡಿ ತುರುವನೂರು, ಶಿಕ್ಷಕರು. ಇಬ್ಬರು ಪುತ್ರಿಯರು, ಓರ್ವ ಪುತ್ರ. ಮಗ ಶಶಿಧರ್ ಚಳ್ಳಕೆರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ. ಪತ್ನಿ ಇದ್ದಾರೆ.

ಏಪ್ರಿಲ್ 20 ರಂದು ತುರುವನೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...