Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ : ಕಾರಣ ಏನು ಗೊತ್ತಾ..?

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಈಗಾಗಲೇ ಘೋಷಣೆಯಾಗಿದೆ. ಈ ಹಿನ್ನೆಲೆ ರಾಜ್ಯದೆಲ್ಲಡೆ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗಲೂ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದೆ. ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿರುವ ಕಾರಣ, ಅವರನ್ನು ಚುನಾವಣಾ ಆಯೋಗದ ಅನುಮತಿ ಮೇರೆಗೆ ವರ್ಗಾವಣೆಗೊಳಿಸಲಾಗಿದೆ‌.

ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಹೇಮಂತ್ ನಿಂಬಾಳ್ಕರ್ ಅವರು ಹೆಚ್ಚು ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅಭ್ಯರ್ಥಿಯೊಂದಿಗಿನ ಅವರ ಸಂಬಂಧವೂ ಇತರ ಐಪಿಎಸ್ ಅಧಿಕಾರಿಗಳು ಮತ್ತು ಚುನಾವಣಾ ಕೆಲಸಕ್ಕಾಗಿ ನಿಯೋಜಿಸಿದ ಪೊಲೀಸರ ಮೇಲೆ ಪ್ರಭಾವ ಬೀರಬಹುದು. ಅಲ್ಲದೆ ಹೇಮಂತ್ ನಿಂಬಾಳ್ಕರ್ ತಮ್ಮ ಪತ್ನಿ ಪರ ಮತಯಾಚನೆ ಮಾಡಲು ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇದೇ ಹುದ್ದೆಯಲ್ಲಿ ಮುಂದುವರೆದರೆ ಅವರು ತಮ್ಮ ಪ್ರಭಾವ ಬಳಸಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಅಭ್ಯರ್ಥಿಗಳ ಪರ ಒಲವು ತೋರುತ್ತಾರೆ. ಹೀಗಾಗಿ ಅವರನ್ನು ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಬೇಕೆಂದು ದೂರು ನೀಡಿದ್ದರು.

ದೂರಿನ ಮೇರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಈಗ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೀತಿ ಸಂಹಿತೆ ಜಾರಿ ಇರುವ ತನಕ ಈ ಆದೇಶ ಚಾಲ್ತಿಯಲ್ಲಿ ಇರಲಿದೆ. ಇನ್ನು ಹೇಮಂತ್ ನಿಂಬಾಳ್ಕರ್ ಅವರ ಜಾಗಕ್ಕೆ ಸೂರಳ್ಕರ್ ವಿಕಾಸ್ ಕಿಶೋರ್ ನೇಮಕ ಮಾಡಲಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗದಲ್ಲಿ ವಿಶೆಷ ಆಯುಕ್ತರಾಗಿದ್ದವರು ಕಿಶೋರ್.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...