Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೋಟೀಸ್ ನೀಡಿದ್ರು ಸಿಎಂ ಬದಲಾವಣೆ ಬಗ್ಗೆ ಮತ್ತೆ ಧ್ವನಿ ಎತ್ತಿದ ಇಕ್ಬಾಲ್ ಹುಸೇನ್..!

---Advertisement---

ಕೊಪ್ಪಳ: ಸಿಎಂ ಬದಲಾವಣೆಯ ವಿಚಾರ ಕಾಂಗ್ರೆಸ್ ಪಕ್ಷದಲ್ಲಿಯೇ ಆಗಾಗ ಚರ್ಚೆಗೆ ಬರ್ತಾ ಇರುತ್ತೆ. ಒಳಗಿನವರೇ ಹೇಳಿಕೆ ನೀಡುವ ಮೂಲಕ ಚರ್ಚೆಯನ್ನ ಹುಟ್ಟು ಹಾಕುತ್ತಾರೆ. ಡಿಕೆಶಿಗೆ ಆಪ್ತರಾಗಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಈ ಹಿಂದೆಯೇ ಒಮ್ಮೆ ಸಿಎಂ ಬದಲಾವಣೆ ವಿಚಾರವನ್ನ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರು ಈ ಅವಧಿಯಲ್ಲಿಯೇ ಸಿಎಂ ಆಗ್ತಾರೆ ಎಂಬ ಮಾತನ್ನ ಹೇಳಿದ್ದರು. ಆಗ ಇಕ್ಬಾಲ್ ಅವರಿಗೆ ನೋಟೀಸ್ ಕೂಡ ಜಾರಿಯಾಗಿತ್ತು. ಇದೀಗ ಮತ್ತೆ ಡಿಕೆಶಿ ನೆಕ್ಸ್ಟ್ ಸಿಎಂ ಎಂಬ ಮಾತನ್ನ ತೆಗೆದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡುತ್ತಾ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಅನ್ನೋದೆ ನನ್ನ ಅಭಿಲಾಷೆ. ಅವರು ಮುಖ್ಯಮಂತ್ರಿ ಆಗಿಯೇ ಆಗ್ತಾರೆ. ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಹೈಕಮಾಂಡ್ ಗೂ ತಿಳಿಸಿದ್ದೇನೆ. ಕಾಂಗ್ರೆಸ್ ಶಿಸ್ತಿನ ಪಕ್ಷ. ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರುಯಾಂಕಾ ಗಾಂಧಿ ಎಲ್ಲರೂ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಅನಿಸಿಕೆ ಅಭಿಲಾಷೆಯನ್ನು ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆಯ ಬಗ್ಗೆಯೇ ಸಾಕಷ್ಟು ಗೊಂದಲವಿದೆ. ಡಿಕೆಶಿ ಬೆಂಬಲಿಗರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅಂತ ಕೂಗುತ್ತಾ ಇದ್ರೆ, ಸಿದ್ದರಾಮಯ್ಯ ನಾನೇ ಪೂರ್ಣಾವಧಿ ಸಿಎಂ ಎನ್ನುತ್ತಿದ್ದಾರೆ. ಬದಲಾವಣೆ ನಿಜಕ್ಕೂ ಆಗುತ್ತಾ..? ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರಾ ಎಂಬುದು ನವೆಂಬರ್ ತಿಂಗಳಲ್ಲಿ ತಿಳಿಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...