Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಪಿ ಯೋಗೀಶ್ವರ್ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು ?

ಡಿಕೆ ಶಿವಕುಮಾರ್
---Advertisement---

ಚಳ್ಳಕೆರೆ, ಅಕ್ಟೋಬರ್.21 : ಚನ್ನಪಟ್ಟಣದ ಬೈಎಲೆಕ್ಷನ್ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೀಶ್ವರ್ ಸ್ಪರ್ಧೆ ಮಾಡ್ತಾರೆ ಎನ್ನುತ್ತಿದ್ದಾಗಲೇ ತಮ್ಮ ಎಂಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಇದರ ನಡುವೆ ಡಿಕೆಶಿ ಅವರ ಸಂಪರ್ಕದಲ್ಲಿದ್ದಾರೆ ಎಂಬ ಆರೋಪವನ್ನು ಡಿಕೆ ಶಿವಕುಮಾರ್ ಅವರು ತಳ್ಳಿ ಹಾಕಿದ್ದಾರೆ.

ಈ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ಏನೇನೋ ಮಾಹಿತಿ ಬರ್ತಾ ಇರಬಹುದು. ಯೋಗೇಶ್ವರ್ ಅವರು ನಮ್ಮ ಸಂಪರ್ಕದಲ್ಲಿ ಇಲ್ಲ, ದಳ ಹಾಗೂ ಬೇರೆ ಬೇರೆಯವರ ಸಂಪರ್ಕದಲ್ಲಿ ಇರಬಹುದು. ಅಸೆಂಬ್ಲಿ ಚುನಾವಣೆಗಿಂತ ಬೈ ಎಲೆಕ್ಷನ್ ನಲ್ಲಿ ಕಾನ್ಫಿಡೆಂಟ್ ಆಗಿದೀವಿ ಎಂದು ಟಾಂಗ್ ನೀಡಿದರು.

ಡಿಸಿಎಂ ಕನ್ನಡಕ ಹಾಕೊಂಡು ನೈಟ್ ರೌಂಡ್ಸ್ ಮಾಡಿದ್ದಾರೆ- R ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ ಕನ್ನಡಕ ಹಾಕೊಂಡು ಯಾರಾದ್ರೂ ನೈಟ್ ರೌಂಡ್ಸ ಮಾಡ್ತಾರೇನ್ರಿ,
ಅವ್ರೇನಾದ್ರೂ ಕನ್ನಡ ಹಾಕೊಂಡು ಮಾಡಿರಬೇಕು, ನಾನು ಕನ್ನಡ ಹಾಕೊಳೋದು ಹಗಲು ಹೊತ್ತು, ಓದುವಾಗ, ಅವ್ರು ನೈಟ್ ರೌಂಡ್ಸ್ ನಲ್ಲಿ ಯಾಕೆ ಹಾಕೋತಾರೋ ಗೊತ್ತಿಲ್ಲ ಎಂದು ಅಶೋಕ್ ಗೆ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಮಳೆಯ ಅಬ್ಬರಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಮಳೆ ಬರಲಿ, ಭೂಮಿ ನೀರು ಕುಡಿಲಿ, ಕೆರೆ ತುಂಬಲಿ, ಕಾವೇರಿ ನದಿ ನೀರು ತಮಿಳುನಾಡಿಗೆ ಜಾಸ್ತಿ ಹರಿದು ಹೋಗಲಿ ಎಂದಿದ್ದಾರೆ. ಮೇಕೆದಾಟು ಯೋಜನೆ ಬರಲಿ, ಮಳೆಯಿಂದ ಬೆಂಗಳೂರು ಅವಾಂತರ ಆಗಿದೆ. ಜನ ಅಂಡರ್ ಗ್ರೌಂಡ್ ಲೆವೆಲ್ ನಲ್ಲಿ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಮಳೆ ಕಡಿಮೆಯಾಗುತ್ತಿದ್ದಂತೆ, ಅದಕ್ಕೆ ಪರಿಹಾರ ಹುಡುಕುವ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment