Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಮಿತ್ ಶಾ ಕರೆಯಿಂದ ಬದಲಾಯಿತಾ ಈಶ್ವರಪ್ಪ ಮನಸ್ಸು ..? ಶಿವಮೊಗ್ಗ ಅಖಾಡದಿಂದ ಹಿಂದಕ್ಕೆ..!

---Advertisement---

 

ಶಿವಮೊಗ್ಗ: ಹಾವೇರಿ ಕ್ಷೇತ್ರದಿಂದ ತನ್ನ ಮಗನಿಗೆ ಟಿಕೆಟ್ ಬೇಕೆಂದು‌ ಮೊದಲೇ ಡಿಮ್ಯಾಂಡ್ ಇಟ್ಟಿದ್ದರು ಕೆ ಎಸ್ ಈಶ್ವರಪ್ಪ. ಆದರೆ ಬಿಜೆಪಿ ಹೈಕಮಾಂಡ್ ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ. ಇದಕ್ಕೆ ಕೋಪಗೊಂಡಿದ್ದ ಈಶ್ವರಪ್ಪ ಬಂಡಾಯ ಸಾರಿದ್ದರು. ಶಿವಮೊಗ್ಗದಲ್ಲಿಯೇ ಮಗನನ್ನು ನಿಲ್ಲಿಸುತ್ತೇನೆ ಎಂದಿದ್ದರು. ಇದೀಗ ಅವರ ಕೋಪ ಶಮನವಾಗಿದ್ದು, ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸುವ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಹೀಗಾಗಿ ಈಶ್ವರಪ್ಪ ಅವರ ಕೋಪವನ್ನು ತಣಿಸಿದ್ದಾರೆ ಎನ್ನಲಾಗಿದೆ. ಅಮಿತ್ ಶಾ ಅವರು ನಿಮ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿದ್ದು, ಎಲ್ಲಾ ಲೋಕಸಭಾ ಕ್ಷೇತ್ರಗಳ ನಾಯಕರ ಜೊತೆಗೆ ಸಭೆ ನಡೆಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಅವರಿಗೂ ಕರೆ ಮಾಡಿ, ಹತ್ತು ನಿಮಿಷಗಳ ಕಾಲ ಮಾತನಾಡಿದ್ದಾರೆ. ಈಶ್ವರಪ್ಪ ಅವರ ಮನವೊಲಿಸುವಂತ ಭರವಸೆಗಳನ್ನು ನೀಡಿದ್ದಾರೆ. ಈ ಭರವಸೆಗಳನ್ನು ರಿಸೀವ್ ಮಾಡಿಕೊಂಡಿರುವ ಈಶ್ವರಪ್ಪ ಅವರು ಬಂಡಾಯದ ಬಾವುಟ ಹಾರಿಸದೆ, ಬಿವೈ ರಾಘವೇಂದ್ರ ಅವರಿಗೆ ಬೆಂಬಲ ನೀಡುತ್ತಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಈ ಸಂಬಂಧ ಮಾಹಿತಿ ನೀಡಲಿದ್ದಾರೆ. ಮಗನ ರಾಜಕೀಯ ಭವಿಷ್ಯಕ್ಕಾಗಿ ಸ್ವತಂತ್ರ ಸ್ಪರ್ಧೆ ಮಾಡುತ್ತಾರಾ ಅಥವಾ ಬೆಂಬಲ ನೀಡುತ್ತಾರಾ ನೋಡಬೇಕಿದೆ. ಯಾಕಂದ್ರೆ ಅಮಿತ್ ಶಾ ಅವರು ಕರೆ ಮಾಡಿದ್ದಾರೆ‌ ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಾನೇ ಈಶ್ವರಪ್ಪ ಅವರು ಹೇಳಿದ್ದಾರೆ. ಹೀಗಾಗಿ ಸುದ್ದಿಗೋಷ್ಟಿಯ ನಂತರ ವಿಚಾರ ತಿಳಿಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment