Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮಿತ್ ಶಾ ಕರೆಯಿಂದ ಬದಲಾಯಿತಾ ಈಶ್ವರಪ್ಪ ಮನಸ್ಸು ..? ಶಿವಮೊಗ್ಗ ಅಖಾಡದಿಂದ ಹಿಂದಕ್ಕೆ..!

Facebook
Twitter
Telegram
WhatsApp

 

ಶಿವಮೊಗ್ಗ: ಹಾವೇರಿ ಕ್ಷೇತ್ರದಿಂದ ತನ್ನ ಮಗನಿಗೆ ಟಿಕೆಟ್ ಬೇಕೆಂದು‌ ಮೊದಲೇ ಡಿಮ್ಯಾಂಡ್ ಇಟ್ಟಿದ್ದರು ಕೆ ಎಸ್ ಈಶ್ವರಪ್ಪ. ಆದರೆ ಬಿಜೆಪಿ ಹೈಕಮಾಂಡ್ ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ. ಇದಕ್ಕೆ ಕೋಪಗೊಂಡಿದ್ದ ಈಶ್ವರಪ್ಪ ಬಂಡಾಯ ಸಾರಿದ್ದರು. ಶಿವಮೊಗ್ಗದಲ್ಲಿಯೇ ಮಗನನ್ನು ನಿಲ್ಲಿಸುತ್ತೇನೆ ಎಂದಿದ್ದರು. ಇದೀಗ ಅವರ ಕೋಪ ಶಮನವಾಗಿದ್ದು, ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸುವ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಹೀಗಾಗಿ ಈಶ್ವರಪ್ಪ ಅವರ ಕೋಪವನ್ನು ತಣಿಸಿದ್ದಾರೆ ಎನ್ನಲಾಗಿದೆ. ಅಮಿತ್ ಶಾ ಅವರು ನಿಮ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿದ್ದು, ಎಲ್ಲಾ ಲೋಕಸಭಾ ಕ್ಷೇತ್ರಗಳ ನಾಯಕರ ಜೊತೆಗೆ ಸಭೆ ನಡೆಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಅವರಿಗೂ ಕರೆ ಮಾಡಿ, ಹತ್ತು ನಿಮಿಷಗಳ ಕಾಲ ಮಾತನಾಡಿದ್ದಾರೆ. ಈಶ್ವರಪ್ಪ ಅವರ ಮನವೊಲಿಸುವಂತ ಭರವಸೆಗಳನ್ನು ನೀಡಿದ್ದಾರೆ. ಈ ಭರವಸೆಗಳನ್ನು ರಿಸೀವ್ ಮಾಡಿಕೊಂಡಿರುವ ಈಶ್ವರಪ್ಪ ಅವರು ಬಂಡಾಯದ ಬಾವುಟ ಹಾರಿಸದೆ, ಬಿವೈ ರಾಘವೇಂದ್ರ ಅವರಿಗೆ ಬೆಂಬಲ ನೀಡುತ್ತಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಈ ಸಂಬಂಧ ಮಾಹಿತಿ ನೀಡಲಿದ್ದಾರೆ. ಮಗನ ರಾಜಕೀಯ ಭವಿಷ್ಯಕ್ಕಾಗಿ ಸ್ವತಂತ್ರ ಸ್ಪರ್ಧೆ ಮಾಡುತ್ತಾರಾ ಅಥವಾ ಬೆಂಬಲ ನೀಡುತ್ತಾರಾ ನೋಡಬೇಕಿದೆ. ಯಾಕಂದ್ರೆ ಅಮಿತ್ ಶಾ ಅವರು ಕರೆ ಮಾಡಿದ್ದಾರೆ‌ ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಾನೇ ಈಶ್ವರಪ್ಪ ಅವರು ಹೇಳಿದ್ದಾರೆ. ಹೀಗಾಗಿ ಸುದ್ದಿಗೋಷ್ಟಿಯ ನಂತರ ವಿಚಾರ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!