ಕಾಂಗ್ರೆಸ್‌ ಕೆಂಪೇಗೌಡರಿಗೆ ಅವಮಾನ ಮಾಡಿದ್ದು ಸರಿಯೇ..?: ಬಿಜೆಪಿ ಪ್ರಶ್ನೆ

suddionenews
1 Min Read

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ವಿರೋಧಿಸಿದ ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ತಿರುಗೇಟು ನೀಡಿದೆ. ಇಂದು ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರ ಜಯಂತಿ. ಕಾಂಗ್ರೆಸ್‌ ಕೆಂಪೇಗೌಡರಿಗೆ ಅವಮಾನ ಮಾಡಿದ್ದು ಸರಿಯೇ..? ಎಂದು ಟ್ವೀಟ್ ಮಾಡಿದೆ.

6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿದ್ದ ನಾಡಪ್ರಭು ಕೆಂಪೇಗೌಡ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತೆಗೆದು ಹಾಕಲಾಯಿತು. ಕೆಂಪೇಗೌಡರಿಗೆ ಕಾಂಗ್ರೆಸ್‌ ನೀಡುವ ಗೌರವ ಇದೇನಾ..? ನಾಡದ್ರೋಹಿ ಕಾಂಗ್ರೆಸ್ ಎಂದು ಹ್ಯಾಷ್ ಟ್ಯಾಗ್ ಮೂಲಕ ಬಿಜೆಪಿ ಕಿಡಿಕಾರಿದ್ದಾರೆ.

ಬೆಂಗಳೂರಿನ ಅಭಿವೃದ್ಧಿಯಲ್ಲಿ ಕೆಂಪೇಗೌಡ ಅವರ ಕೊಡುಗೆಯ ಬಗ್ಗೆ ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಂಪೇಗೌಡರ ಪಠ್ಯವನ್ನು ಸೇರಿಸಿತ್ತು. ಆದರೆ, ಅದೇ ಪಠ್ಯಪುಸ್ತಕವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಿದು ಬಿಸಾಡಿದರು. ಇದು ನಾಡಪ್ರಭುವಿಗೆ ಮಾಡಿದ ಅವಮಾನವಲ್ಲವೇ..? ಎಂದು ರಾಜ್ಯ ಬಿಜೆಪಿ ಘಟಕ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *