ಬಿಗ್ ಬಾಸ್ ಸೀಸನ್ 10 ಫಿನಾಲೆಗೆ ಸನಿಹವಾಗಿದೆ. ಮನೆ ಮಂದಿಯ ಆಟವೂ ಹಾಗೇ ಇದೆ. ಕಡೆಯ ಲಕ್ಸುರಿ ಬಜೆಟ್ ಅನ್ನು ಸುಲಭವಾಗಿಯೇ ಕಳೆದುಕೊಂಡಿದ್ದಾರೆ. ಇದರ ನಡುವೆ ಮನೆಯಿಂದ ಇಂದು ಹೊರಹೋಗುವವರು ಯಾರು..? ಫಿನಾಲೆಗೆ ಉಳಿದುಕೊಳ್ಳುವುದು ಯಾರು ಎಂಬುದೇ ಕುತೂಹಲಕಾರಿಯಾಗಿದೆ. ಈಗಾಗಲೇ ಟಿಕೆಟ್ ಟು ಫಿನಾಲೆ ಟಾಸ್ಕ್ ಗಳಲ್ಲಿ ಸಂಗೀತಾ ಗೆಲುವು ಕಂಡಿದ್ದಾರೆ. ಫಿನಾಲೆಗೆ ಟಿಕೆಟ್ ಪಡೆದು ಸೇಫ್ ಆಗಿದ್ದಾರೆ.
ಪ್ರತಾಪ್ ಕೂಡ ಮುಂಚೂಣಿಯಲ್ಲಿದ್ದಾರೆ. ನಮ್ರತಾ 3ನೇ ಸ್ಥಾನದಲ್ಲಿದ್ದಾರೆ. ನಮ್ರತಾ ಸೇರಿದಂತೆ ಕಾರ್ತಿಕ್, ವಿನಯ್, ವರ್ತೂರು ಸಂತೋಷ್, ತನಿಷಾ ನಾಮಿನೇಟ್ ಆಗಿದ್ದಾರೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಅವರು ತುಕಾಲಿ ಸಂತೋಷ್ ಎಂದೇ ಊಹೆ ಮಾಡಲಾಗಿದೆ.
ಕಲರ್ಸ್ ಕನ್ನಡ ಬಿಟ್ಟಿರುವ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ‘ಸಂತು-ಪಂತು ಒಬ್ಬರಿಗೆ ಇಂದು ಜರ್ನಿ ಮುಗಿಯಲಿದೆ’ ಎಂದಿದ್ದಾರೆ. ವರ್ತೂರು ಸಂತೋಷ್, ತುಕಾಲಿಗೆ. ತುಕಾಲಿ ಸಂತೋಷ್ ವರ್ತೂರು ಸಂತೋಷ್ ಅವರಿಗೆ ಬೆಂಬಲ ನೀಡಿದ್ದಾರೆ. ಇಬ್ಬರ ಫ್ರೆಂಡ್ಶಿಪ್ ನೋಡಿ ಸುದೀಪ್ ಕೂಡ ಶಬ್ಬಾಶ್ ಹೇಳಿದ್ದಾರೆ.
ಈ ಸೀಸನ್ ನಲ್ಲಿ ಯಾರಲ್ಲೂ ನೋಡಿರದ ಬಾಂಧವ್ಯವನ್ನು ನಿಮ್ಮಲ್ಲಿ ನೋಡಿದ್ದೇನೆ ಎಂದಿದ್ದಾರೆ. ಈ ಸೀಸನ್ ನಲ್ಲಿ ಆರಂಭದಿಂದ ಕಡೆಯವರೆಗೂ ಒಳ್ಳೆ ಸ್ನೇಹ ಕಾಪಾಡಿಕೊಂಡು ಬಂದಿದ್ದು ಇವರಿಬ್ಬರೇನೆ. ಯಾರಲ್ಲಿಯೂ ಮನೆ ಬಿಟ್ಟು ಹೋಗ್ತಾ ಇದ್ದೀವಿ ಅನ್ನೋ ಫೀಲಿಂಗ್ಸ್ ಇಲ್ಲ. ಯಾರೂ ಆ ಭಾವನೆಯನ್ನು ವ್ಯಕ್ತಪಡಿಸುತ್ತಲೂ ಇಲ್ಲ. ಗೇಮ್ ಗೇಮ್ ಗೇಮ್ ಅಷ್ಟೇ. ಆದರೆ ನಿನ್ನೆ ರಾತ್ರಿ ಕೂಡ ತುಕಾಲಿ ಹಾಗೂ ವರ್ತೂರು ಇನ್ನು ಕೆಲವೇ ದಿನಗಳಲ್ಲಿ ಈ ಜರ್ನಿ ಮುಗಿದು ಬಿಡುತ್ತದೆ ಎಂದೇ ಕಣ್ಣೀರು ಹಾಕಿದ್ದರು. ಇದೀಗ ಬಿಗ್ ಬಾಸ್ ಇವರಿಬ್ಬರ ಬಾಂಧವ್ಯಕ್ಕೆ ಮನಸೋತಿದೆ. ಮೂಲಗಳ ಪ್ರಕಾರ ಇಂದು ಬಿಗ್ ಬಾಸ್ ಮನೆಯಿಂದ ಯಾರೂ ಹೊರ ಹೋಗುತ್ತಿಲ್ಲ. ತುಕಾಲಿ ಕೂಡ ಸೇವ್ ಆಗಿದ್ದಾರೆ. ಆದರೆ ವಾರದ ನಡುವೆ ಒಬ್ಬರನ್ನು ಮನೆಗೆ ಕಳುಹಿಸಲಿದ್ದಾರೆ.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…