Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಕೆ ಹರಿಪ್ರಸಾದ್ ರಾಜೀನಾಮೆ ನೀಡುತ್ತಿರುವುದು ಸತ್ಯವಾ..? ಈ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಸಿದ್ದರಾಮಯ್ಯ ಸರ್ಕಾರದಲ್ಲಿ ಈಗಾಗಲೇ ಸಚಿವರೆಲ್ಲಾ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನ ಸಿಗದೆ ಇದ್ದ ಕಾರಣ ಹಕವರು ಅಸಮಾಧಾನ ಹೊರ ಹಾಕಿದ್ದಾರೆ. ಅದರಲ್ಲಿ ಬಿಕೆ ಹರಿಪ್ರಸಾದ್ ಕೂಡ ಒಬ್ಬರಾಗಿದ್ದಾರೆ. ಸಚಿವ ಸ್ಥಾ‌ನ ನೀಡದೆ ಇದ್ದ ಕಾರಣಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ಸ್ವತಃ ಬಿಕೆ ಹರಿಪ್ರಸಾದ್ ಅವರೇ ಉತ್ತರ ನೀಡಿದ್ದಾರೆ.

ಮೇಲ್ಮನೆ ಉಪಾಧ್ಯಕ್ಷರನ್ನು, ಸಭಾ ನಾಯಕರನ್ನು ಸಚಿವರನ್ನಾಗಿ ಮಾಡುವುದು ಸಂಪ್ರದಾಯ, ಪದ್ಧತಿ ಹಿಂದಿನಿಂದಲೂ ಇತ್ತು. ಆದರೆ ಸಿಎಂ ಸಿದ್ದರಾಮಯ್ಯ ಆ ಸಂಪ್ರದಾಯವನ್ನು ಮುರಿದಿದ್ದಾರೆ. ನಾನೆಂದು ಸಚಿವ ಸ್ಥಾನ ಬೇಕೆಂದು ಕೇಳಲಿಲ್ಲ. ಸಂಸತ್ ನಲ್ಲಿ ಸಭಾನಾಯಕರನ್ನಾಗಿ ಯಾರನ್ನು ಮಾಡಬೇಕೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನೇ ಕೇಳಿ. ಕೆಲವೊಂದು ವಿಚಾರಗಳು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬುತ್ತವೆ.

ರಾಜೀನಾಮೆ ಕೊಡುವ ವಿಚಾರವೂ ಅಷ್ಟೇ. ನಾನು ಎಂದು ರಾಜೀನಾಮೆ ಕೊಡ್ತೀನಿ ಅಂತ ಹೇಳಿಲ್ಲ. ಅದೆಲ್ಲಾ ವಾಟ್ಸಾಪ್ ಯೂನಿವರ್ಸಿಟಿಯಿಂದ ಬಂದ ವಿಷಯವಾಗಿದೆ. ಸೋನಿಯಾ ಗಾಂಧಿ ಅವರು ನಂಗೊಂದು ಜವಬ್ದಾರಿ ನೀಡಿ ಪರಿಷತ್ ಸದಸ್ಯ ಸ್ಥಾನದ ಜವಬ್ದಾರಿ ನೀಡಿದ್ದಾರೆ. ಸಚಿವ ಸ್ಥಾ‌ನ ಇಲ್ಲದೇ ಇದ್ದರೂ ಪರಿಷತ್ ನ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡುತ್ತೇನೆ. ರಾಜೀನಾಮೆ ನೀಡುವುದಾದರೂ ಸೋನಿಯಾ ಗಾಂಧಿ ಮತ್ತು ಸಭಾಪತಿಯವರಿಗೆ ನೀಡುತ್ತೇನೆ ಎಂದು ರಾಜೀನಾಮೆ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!