Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಮತ್ತು ಧ್ರುವ ನಡುವೆ ಮನಸ್ತಾಪ ಇರುವುದು ನಿಜನಾ..? ಆಕ್ಷನ್ ಪ್ರಿನ್ಸ್ ಕೊಟ್ಟ ಸುಳಿವು ಏನು..?

Facebook
Twitter
Telegram
WhatsApp

 

ಬೆಂಗಳೂರು: ಇತ್ತಿಚೆಗೆ ಕಾವೇರಿ ಹೋರಾಟದಲ್ಲಿ ಇಡೀ ಸ್ಯಾಂಡಲ್ ವುಡ್ ಭಾಗಿಯಾಗಿತ್ತು. ಅಂದು ವೇದಿಕೆ ಮೇಲೆ ಕೂತಿದ್ದ ಧ್ರುವ, ದರ್ಶನ್ ಬಂದಾಗಲೂ ಮಾತನಾಡದೆ, ನೋಡದೆ ಎದ್ದು ಹೋಗಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲೆಲ್ಲಾ ಟ್ರೋಲ್ ಆಗಿತ್ತು. ದರ್ಶನ್ ಅಭಿಮಾನಿಗಳು ಧ್ರುವ ಮೇಲೆ, ಧ್ರುವ ಅಭಿಮಾನಿಗಳು ದರ್ಶನ್ ಮೇಲೆ ಮುಗಿಬಿದ್ದಿದ್ದರು. ಬಳಿಕ ಒಳ್ಳೆ ಹುಡುಗ ಪ್ರಥಮ್, ಧ್ರುವ ಅವರು ನೋವಲ್ಲಿದ್ದಾರೆ ಎಂಬ ವಿಚಾರವನ್ನ ತಿಳಿಸಿ, ಅದಕ್ಕೊಂದು ತೆರೆ ಎಳೆದಿದ್ದರು. ಆದರೆ ಈಗ ಧ್ರುವ ಅವರು ಹೇಳಿದ ಮಾತು ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ.

ದರ್ಶನ್ ಗೆ ಒಂದಷ್ಟು ಪ್ರಶ್ನೆ ಕೇಳುವುದು ಇದೆ ಎಂದು ಹೇಳುವ ಮೂಲಕ ಇಬ್ಬರ ನಡುವೆ ಮನಸ್ತಾಪ ಇದೆ ಎಂಬುದನ್ನು ಪರೋಕ್ಷವಾಗಿ ಪ್ರೂವ್ ಮಾಡಿದ್ದಾರೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಧ್ರುವ ಸರ್ಜಾ, ದರ್ಶನ್ ಬಗ್ಗೆ ಒಂದಷ್ಟು ಮಾತುಗಳನ್ನಾಡಿದ್ದಾರೆ. ‘ಅವರು ಹಿರಿಯ ನಟ. ನಮ್ಮ ಸೀನಿಯರ್ ಕೂಡ ಹೌದು. ದರ್ಶನ್ ಅವರ ಉಪಸ್ಥಿತಿ ಹಾಗೂ ಅನುಪಸ್ಥಿತಿಗೆ ಅದೇ ಮರ್ಯಾದೆ ಇರುತ್ತದೆ. ಆದರೆ ಅವರ ಬಳಿ ಕೇಳುವುದಕ್ಕೆ ಒಂದಷ್ಟು ಪ್ರಶ್ನೆಗಳಿವೆ. ಅದನ್ನು ಅವರ ಬಳಿಯೇ‌ ಕೇಳುತ್ತೇನೆ’ ಎಂದು ಹೊಸ ಟ್ವಿಸ್ಟ್ ನೀಡಿದ್ದಾರೆ.

ಇನ್ನು ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ, ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನಲ್ಲಿರುವ ಗೊಂದಲದ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ನನಗೂ ಸ್ವಾಭಿಮಾನವಿದೆ. ನಾನು ಅವರೊಟ್ಟಿಗೆ ಈ ಬಗ್ಗೆ ಮಾತನಾಡುತ್ತೇನೆ. ನನಗೆ ನಾಟಕೀಯವಾಗಿ ಇರುವುದಕ್ಕೆ ಬರಲ್ಲ. ಮನಸ್ಸಲ್ಲೊಂದು ಹೊರಗೊಂದು ಇರುವುದಕ್ಕೆ ಆಗಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!