ಬೆಂಗಳೂರು: ಇತ್ತಿಚೆಗೆ ಕಾವೇರಿ ಹೋರಾಟದಲ್ಲಿ ಇಡೀ ಸ್ಯಾಂಡಲ್ ವುಡ್ ಭಾಗಿಯಾಗಿತ್ತು. ಅಂದು ವೇದಿಕೆ ಮೇಲೆ ಕೂತಿದ್ದ ಧ್ರುವ, ದರ್ಶನ್ ಬಂದಾಗಲೂ ಮಾತನಾಡದೆ, ನೋಡದೆ ಎದ್ದು ಹೋಗಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲೆಲ್ಲಾ ಟ್ರೋಲ್ ಆಗಿತ್ತು. ದರ್ಶನ್ ಅಭಿಮಾನಿಗಳು ಧ್ರುವ ಮೇಲೆ, ಧ್ರುವ ಅಭಿಮಾನಿಗಳು ದರ್ಶನ್ ಮೇಲೆ ಮುಗಿಬಿದ್ದಿದ್ದರು. ಬಳಿಕ ಒಳ್ಳೆ ಹುಡುಗ ಪ್ರಥಮ್, ಧ್ರುವ ಅವರು ನೋವಲ್ಲಿದ್ದಾರೆ ಎಂಬ ವಿಚಾರವನ್ನ ತಿಳಿಸಿ, ಅದಕ್ಕೊಂದು ತೆರೆ ಎಳೆದಿದ್ದರು. ಆದರೆ ಈಗ ಧ್ರುವ ಅವರು ಹೇಳಿದ ಮಾತು ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ.
ದರ್ಶನ್ ಗೆ ಒಂದಷ್ಟು ಪ್ರಶ್ನೆ ಕೇಳುವುದು ಇದೆ ಎಂದು ಹೇಳುವ ಮೂಲಕ ಇಬ್ಬರ ನಡುವೆ ಮನಸ್ತಾಪ ಇದೆ ಎಂಬುದನ್ನು ಪರೋಕ್ಷವಾಗಿ ಪ್ರೂವ್ ಮಾಡಿದ್ದಾರೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಧ್ರುವ ಸರ್ಜಾ, ದರ್ಶನ್ ಬಗ್ಗೆ ಒಂದಷ್ಟು ಮಾತುಗಳನ್ನಾಡಿದ್ದಾರೆ. ‘ಅವರು ಹಿರಿಯ ನಟ. ನಮ್ಮ ಸೀನಿಯರ್ ಕೂಡ ಹೌದು. ದರ್ಶನ್ ಅವರ ಉಪಸ್ಥಿತಿ ಹಾಗೂ ಅನುಪಸ್ಥಿತಿಗೆ ಅದೇ ಮರ್ಯಾದೆ ಇರುತ್ತದೆ. ಆದರೆ ಅವರ ಬಳಿ ಕೇಳುವುದಕ್ಕೆ ಒಂದಷ್ಟು ಪ್ರಶ್ನೆಗಳಿವೆ. ಅದನ್ನು ಅವರ ಬಳಿಯೇ ಕೇಳುತ್ತೇನೆ’ ಎಂದು ಹೊಸ ಟ್ವಿಸ್ಟ್ ನೀಡಿದ್ದಾರೆ.

ಇನ್ನು ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ, ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನಲ್ಲಿರುವ ಗೊಂದಲದ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ನನಗೂ ಸ್ವಾಭಿಮಾನವಿದೆ. ನಾನು ಅವರೊಟ್ಟಿಗೆ ಈ ಬಗ್ಗೆ ಮಾತನಾಡುತ್ತೇನೆ. ನನಗೆ ನಾಟಕೀಯವಾಗಿ ಇರುವುದಕ್ಕೆ ಬರಲ್ಲ. ಮನಸ್ಸಲ್ಲೊಂದು ಹೊರಗೊಂದು ಇರುವುದಕ್ಕೆ ಆಗಲ್ಲ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














