ಲಕ್ಷ್ಮೀ ಹೆಬ್ಬಾಳ್ಕರ್ ಸಮಯಕ್ಕಾಗಿ ಕಾದು ಕುಳಿತಿದ್ದಾರಾ..?

suddionenews
1 Min Read

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಬಿಸಿ ಜೋರಾಗಿದೆ. ಬೆಳಗಾವಿಯಲ್ಲಿ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ ರಮೇಶ್ ಜಾರಕಿಹೊಳಿ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಟಾರ್ಗೆಟ್ ಮಾಡಿದ್ದು, ಇದೇ ಕಾರಣಕ್ಕೆ ಇತ್ತಿಚೆಗೆ ಸಿಡಿ ವಿಚಾರವನ್ನು ತೆಗೆದಿದ್ದಾರೆ.

ಸಿಡಿ ಕೇಸನ್ನು ಸಿಬಿಐ ಒಪ್ಪಿಸಿದ್ರೆ ಎಲ್ಲಾ ಸತ್ಯವು ಹೊರ ಬರುತ್ತೆ ಎಂದು ಹರಿಹಾಯ್ದಿದ್ದ ರಮೇಶ್ ಜಾರಕಿಹೊಳಿ, ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧವೂ ವಿಷ ಕನ್ಯೆ ಎಂದೆಲ್ಲಾ ಕಿಡಿಕಾರಿದ್ದರು. ಆದರೆ ಇಷ್ಟೆಲ್ಲಾ ಆದರೂ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ಒಂದೇ ಒಂದು ಪ್ರತಿಕ್ರಿಯೆಯನ್ನು ನೀಡಿಲ್ಲ. ಬಲ್ಲ ಮೂಲಗಳ ಪ್ರಕಾರ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಮಯ ನೋಡಿ ಉತ್ತರ ಕೊಡುವುದಕ್ಕೆ ಕಾಯುತ್ತಿದ್ದಾರೆ ಎನ್ನಲಾಗಿದೆ.

ಕೆಲವೊಂದು ವಿಚಾರಗಳಿಗೆ ನೇರವಾಗಿ ಉತ್ತರ ಕೊಡದೆ, ಅವರ ತಮ್ಮನ ಕಡೆಯಿಂದ ತಿರುಗೇಟು ಕೊಟ್ಟಿದ್ದಾರೆ. ಇದು ಚುನಾವಣೆ ಸಮಯ. ನಾನು ಎಚ್ಚರ ತಪ್ಪಲ್ಲ. ನಂಗೂ ಸಮಯ ಬೇಕು. ನಾನು ಸಮಯಕ್ಕಾಗಿ ಕಾಯುತ್ತಾ ಇದ್ದೀನಿ. ಚುನಾವಣೆ ಸಮಯದಲ್ಲಿ ನಾನು ಲೂಸ್ ಟಾಕ್ ಮಾಡಲ್ಲ ಅಂತ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತರೊಬ್ಬರ ಬಳಿ ಹೇಳಿಕೊಂಡಿದ್ದರಂತೆ.

Share This Article
Leave a Comment

Leave a Reply

Your email address will not be published. Required fields are marked *